ಕಲಬುರಗಿ,ಫೆ.19:ಇಲ್ಲಿನ ತಾಲೂಕ ಆವರಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು.
ಕಲಬುರಗಿ, ಬೆಂಗಳೂರು, ಹೈದ್ರಾಬಾದ, ಪುಣೆಯ ಉದ್ಯೋಗ ನೀಡುವ ಸುಮಾರು 30 ಕಂಪನಿಗಳು ಉದ್ಯೋಗ ಮೇಳ ದಲ್ಲಿ ಭಾಗವಹಿಸಿದ್ದು, ಸುಮಾರು 1,349 ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದರು. ಸ್ಥಳದಲ್ಲಿಯೇ 189 ಜನರು ನೇಮಕವಾಗಿದ್ದು, ಉಳಿದಂತೆ 300 ಅಭ್ಯರ್ಥಿಗಳನ್ನು ಕಂಪನಿಗಳು ಶಾರ್ಟ್ ಲಿಸ್ಟ್ ಮಾಡಿದ್ದು, ಮುಂದೆ ಅವರನ್ನು ಸಂಪರ್ಕಿಸಿ ಅಂತಿಮ ಹಂತದ
ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದೆಂದು ತಿಳಿಸಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕಲಬುರಗಿ ಜಿಲ್ಲಾ ಪಂಚಾಯತ ಹಾಗೂ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಹಯೋಗದಲ್ಲಿ ನಡೆದ
ಬೃಹತ್ ಉದ್ಯೋಗ ಮೇಳವನ್ನು ಜಿಲ್ಲಾಪಂಚಾಯ್ ಸಿ.ಇ.ಓ ಭಂ ಸಿಂಗ ಮೀನಾಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿರುದ್ಯೋಗ ಯುವಕ- ಯುವತಿಯರನ್ನು ಉದ್ಯೋಗ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಸುಮಾರು 30 ಕಂಪನಿಗಳು ಭಾಗವಹಿಸಿ,
ಉದ್ಯೋಗಾಕಾಂಕ್ಷಿಗಳಿಗೆ ಸಂದ ರ್ಶನ ಕೈಗೊಂಡಿದ್ದಾರೆ. ಉದ್ಯೋ ಗ ಪಡೆದುಕೊಂಡವರು ಸ್ವಾವಲಂ ಬನೆ ಬದುಕು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದ ಅವರು, ಸಾಂಕೇತಿ ಕವಾಗಿ 5 ಜನ ಯುವಕ-ಯುವತಿಯರಿಗೆ ಉದ್ಯೋಗದ ಆದೇಶ ಪತ್ರ ನೀಡಿದರು.
ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಜಗದೇವಪ್ಪ ಆಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ತಾಲೂಕ ಪಂಚಾಯತ್ ಇ.ಓ ಎಂ.ಡಿ.ಸೈಯದ್ ಪಟೇಲ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಕಲಬುರಗಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ನಂದಕಿಶೋರ ಸೇರಿದಂತೆ ಅನೇಕರು ಇದ್ದರು. ಜಿಲ್ಲಾ ಪಂಚಾ ಯತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಲೋಹಿತ್ ಕುಮಾರ್ ನಿರೂಪಿಸಿದರೆ ಅರುಣ್ ಕುಮಾರ್ ವಂದಿಸಿದರು.
