ರಾಯಚೂರು ಫೆ 25 : ಕಾಲುವೆಗಳಲ್ಲಿ ನೀರು ಹರಿಯುವ ಅವಧಿ ಮುಕ್ತಾಯದೊಳಗಡೆ ಜಿಲ್ಲೆಯ ಎಲ್ಲ ಕೆರೆಗಳನ್ನು ತುಂಬಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ 10 ದಿನಗಳ ಗಡುವು ವಿದಿಸಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ರಾಯಚೂರ ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯ ಸಮಯದಲ್ಲಿ ಕುಡಿಯುವ ನೀರಿನ ಮತ್ತು ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಹೊಸ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಫೆ.25ರಂದು ಸಭೆ ನಡೆಸಿ ಅವರು ಮಾತನಾಡಿದರು.
ಬೇಸಿಗೆಯ ಬೀಸಿಲಿನ ಧಗೆ ದಿನೆದಿನೇ ಹೆಚ್ಚುತ್ತಿದೆ. ಬರುವ ಮಾರ್ಚ, ಏಪ್ರೀಲ್ ಮತ್ತು ಮೇ ಮಾಹೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಯಚೂರ ಜಿಲ್ಲಾ ವ್ಯಾಪ್ತಿಯಲ್ಲಿನ ರಾಯಚೂರ, ಸಿಂಧನೂರ, ಮಾನವಿ, ಲಿಂಗಸಗೂರು, ದೇವದುರ್ಗ ಮತ್ತು ಸಿರವಾರ ತಾಲೂಕು ವ್ಯಾಪ್ತಿಯಲ್ಲಿ ಭಾಗಶಃ ನೀರು ತುಂಬಿದ ಕೆರೆಗಳನ್ನು ಕಾಲುವೆಗಳಿಗೆ ನೀರು ಹರಿಯುತ್ತಿರುವ ಈ ಸಂದರ್ಭದಲ್ಲಿ ಪೂರ್ಣ ಪ್ರಮಾಣದಲ್ಲಿ ತುಂಬಿಸುವ ಕಾರ್ಯಕ್ಕೆ ಇದೀಗ ಮೊದಲಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಆಯಾ ತಾಲೂಕಿನ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮತ್ತು ಇನ್ನೀತರ ಇಲಾಖೆಗಳ ಅಧಿಕಾರಿಗಳು ತಂಡವಾಗಿ ಪರಸ್ಪರ ಸಮನ್ವಯ ಮಾಡುವ ಮೂಲಕ ಯುದ್ದೋಪಾದಿಯಲ್ಲಿ ಜಿಲ್ಲೆಯಲ್ಲಿನ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಬೇಕು. ಎಲ್ಲ ಕೆರೆಗಳು ತುಂಬಿದಲ್ಲಿ ಬೇಸಿಗೆಯ ಅವಧಿಯಲ್ಲಿ ಜನರಿಗೆ ಮತ್ತು ಜಾನುವಾರುಗಳಿಗೆ ನೀರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.
ಸಹಾಯಕ ಆಯುಕ್ತರಿಗೆ ಸೂಚನೆ: ರಾಯಚೂರ ಮತ್ತು ಲಿಂಗಸೂರು ಉಪ ವಿಭಾಗದ ಅಧಿಕಾರಿಗಳು ತಮ್ಮ ಹಂತದಲ್ಲಿ ಆಯಾ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಪಂಚಾಯಿತಿಗಳ ಮತ್ತು ಇನ್ನೀತರ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಿಯಮಿತವಾಗಿ ನಡೆಸಿ ಕೆರೆ ತುಂಬಿಸುವ ಕಾರ್ಯದ ಮೇಲ್ವಿಚಾರಣೆ ಮಾಡಬೇಕು. ಬೇಸಿಗೆಯ ಅವಧಿಯಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸಬಹುದಾದ ಹಳ್ಳಿಗಳನ್ನು ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ತೆಗೆದುಕೊಂಡ ರ್ಯಾಯ ವ್ಯವಸ್ಥೆಯ ಕ್ರಮಗಳ ಬಗೆಗಿನ ಸಭಾ ನಡಾವಳಿ ಸಿದ್ಧಪಡಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಸೂಚನೆ ನೀಡಿದರು.
ನೋಡಲ್ ಅಧಿಕಾರಿಗಳ ನೇಮಕ : ಜಿಲ್ಲೆಯ ಯಾವುದೇ ಗ್ರಾಮಸ್ಥರಿಂದ ಕುಡಿಯುವ ನೀರಿನ ಸರಬರಾಜಿಗೆ ಸಂಬAಧಿಸಿದAತೆ ಯಾವುದೇ ದೂರುಗಳು ಬಾರದ ಹಾಗೆ ಕಾರ್ಯನಿರ್ವಹಿಸುವ ಸಂಬAಧ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳನ್ನೊಳಗೊಂಡು ಎಲ್ಲ ತಾಲೂಕುಗಳಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಾರ್ವಜನಿಕರಿಗೆ ಸ್ಪಂದಿಸಿ: ಅಧಿಕಾರಿಗಳು ಮತ್ತು ಸಿಬ್ಬಂದಿಯು ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ ಎನ್ನುವ ದೂರುಗಳು ಬಾರದ ಹಾಗೆ ಅಧಿಕಾರಿಗಳು ತಮ್ಮ ಕಾರ್ಯವೈಖರಿಯನ್ನು ಸರಿಯಾಗಿಟ್ಟುಕೊಳ್ಳಬೇಕು. ಬೇಸಿಗೆಯ ಅವಧಿ ಮುಕ್ತಾಯವಾಗುವವರೆಗೆ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು, ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಇನ್ನೀತರ ಇಲಾಖೆಯ ಅಧಿಕಾರಿಗಳು ಕಾಳಜಿ ವಹಿಸಿ ಕಾರ್ಯನಿರ್ವಹಿಸಬೇಕು. ಮೊಬೈಲ್ ಕರೆಗಳನ್ನು ಸ್ವೀಕರಿಸಿ ಜನರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ಪಾಂಡ್ವೆ ಅವರು ಮಾತನಾಡಿ, ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರು ಸರಬರಾಜಿನ ಫೈಪಲೈನಗಳು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಈ ರೀತಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದಾಗ್ಯೂ ಯಾವುದಾದರು ಕಡೆಗಳಲ್ಲಿ ಪೈಪಲೈನ್ ಲಿಕೇಜ್ ಕಾರಣದಿಂದ ಕಲುಷಿತ ನೀರು ಸರಬರಾಜು ಆಗಿ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಅಧಿಕಾರಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬೇಸಿಗೆಯ ಅವಧಿಯಲ್ಲಿ ಎಲ್ಲಾ ಮನೆಗಳಿಗೆ ನೀರು ತಲುಪುವ ಹಾಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗಬೇಕು. ಜೆಜೆಎಂ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಎಲ್ಲಾ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಿಇಓ ಅವರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಮತ್ತು ಎಲ್ಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ, ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
