ಉದ್ಯೋಗ ಮೇಳ:189 ಜನರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ವಿತರಣೆ

ಉದ್ಯೋಗ ಮೇಳ:189 ಜನರಿಗೆ ಸ್ಥಳದಲ್ಲಿ ನೇಮಕಾತಿ ಆದೇಶ ವಿತರಣೆ

ಕಲಬುರಗಿ,ಫೆ.19:ಇಲ್ಲಿನ ತಾಲೂಕ ಆವರಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು. ಕಲಬುರಗಿ, ಬೆಂಗಳೂರು, ಹೈದ್ರಾಬಾದ, ಪುಣೆಯ ಉದ್ಯೋಗ ನೀಡುವ ಸುಮಾರು 30 ಕಂಪನಿಗಳು ಉದ್ಯೋಗ ಮೇಳ ದಲ್ಲಿ ಭಾಗವಹಿಸಿದ್ದು, ಸುಮಾರು 1,349 ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿದ್ದರು. ಸ್ಥಳದಲ್ಲಿಯೇ 189 ಜನರು ನೇಮಕವಾಗಿದ್ದು, ಉಳಿದಂತೆ 300 ಅಭ್ಯರ್ಥಿಗಳನ್ನು ಕಂಪನಿಗಳು ಶಾರ್ಟ್ ಲಿಸ್ಟ್ ಮಾಡಿದ್ದು, ಮುಂದೆ ಅವರನ್ನು ಸಂಪರ್ಕಿಸಿ ಅಂತಿಮ ಹಂತದ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದೆಂದು ತಿಳಿಸಿದರು. ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ…

ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಹವಾಮಾನ ವೈಪರೀತ್ಯ : ರಾಜ್ಯದಲ್ಲಿ ಬೇಸಿಗೆಗೂ ಮೊದಲೇ ಭಾರಿ ಬಿಸಿಲಬ್ಬರ..!

ಬೆಂಗಳೂರು, ಫೆ.19-ಹವಾಮಾನ ದಲ್ಲಾಗುತ್ತಿರುವ ಬದಲಾವಣೆ ಯಿಂದಾಗಿ ತಾಪಮಾನದಲ್ಲಿ ವ್ಯತ್ಯಾಸವಾಗುತ್ತಿದ್ದು,ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ತೀವ್ರಗೊಂಡಿದೆ. ಬಿಸಿಲನಾಡು ಎಂದೇ ಬಿಂಬಿಸಲಾಗುವ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 40 ಡಿ.ಸೆಂ.ನಷ್ಟು ದಾಖಲಾಗಿದೆ. ಮುಂದಿನ ನಾಲ್ಕು ದಿನಗಳಲ್ಲಿ 2ರಿಂದ 3ಡಿ.ಸೆಂ.ನಷ್ಟು ತಾಪಮಾನ ಏರಿಕೆಯಾಗುವ ಮುನ್ಸೂಚನೆಗಳಿವೆ. ಚಳಿಗಾಲದಲ್ಲೇ ರಾಜ್ಯಾದ್ಯಂತ ಗರಿಷ್ಠ ಹಾಗೂ ಕನಿಷ್ಠ ತಾಪಮಾನಗಳಲ್ಲಿ ಸರಾಸರಿಗಿಂತ ಹೆಚ್ಚಾಗಿರುವುದು ಕಂಡುಬರುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಉಷ್ಣಾಂಶ ಈಗಾಗಲೇ 30 ಡಿ.ಸೆಂ. ಗಡಿ ದಾಟಿದೆ. ಕನಿಷ್ಠ ತಾಪಮಾನವೂ16 ಡಿ.ಸೆಂ.ಗಿಂತ ಹೆಚ್ಚಾಗಿದೆ….

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ಜಿಲ್ಲಾಡಳಿತದಿಂದ ಸಂತಕವಿ ಸರ್ವಜ್ಞ ಜಯಂತಿ ಆಚರಣೆ, ಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿಸರ್ವಜ್ಞರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ

ರಾಯಚೂರು ಫೆ 20: ಸರ್ವಜ್ಞರು ಸಮಾಜದ ಸುಧಾರಣೆಗೆ ವಚನಗಳ ಮೂಲಕ ಸಾಕಷ್ಟು ಜಾಗೃತಿಯನ್ನು ಮೂಡಿಸಿದ್ದಾರೆ. ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಮಾತ್ರ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಜೊತೆಗೆ ಪ್ರತಿಯೊಬ್ಬರು ಉತ್ತಮ ಜೀವನವನ್ನು ನಡೆಸಲು ಅನೇಕ ಸಂದೇಶಗಳನ್ನು ಜಗತ್ತಿಗೆ ನೀಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕುಂಬಾರ ಸಂಘದ ಅಧ್ಯಕ್ಷ ವೈ.ಸುರೇಂದ್ರಬಾಬು ಹೇಳಿದರು.  ಫೆ.20ರ ಗುರುವಾರ ದಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ…

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಜಿಂದಾಲ್ ನಲ್ಲಿ ಮೂರು ದಿನಗಳ ಬೃಹತ್ ರಕ್ತದಾನ ಶಿಬಿರಕ್ಕೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಚಾಲನೆ ಅರ್ಹರು ತಪ್ಪದೇ ರಕ್ತದಾನ ಮಾಡುವಂತೆ ಕರೆ

ಬಳ್ಳಾರಿ,20ಫೆ:ಸಂಡೂರಿನ ತೋರಣಗಲ್ಲು ಬಳಿಯ ಜಿಂದಾಲ್ ನಲ್ಲಿ ಇಂದಿನಿAದ (ಫೆ.20, 21, 22) ಮೂರು ದಿನಗಳ ಕಾಲ ನಡೆಯಲಿರುವ ಬೃಹತ್ ರಕ್ತದಾನ ಶಿಬಿರಕ್ಕೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಗುರುವಾರ ಒಪಿಜೆ ಸೆಂಟರ್ ಸಭಾಂಗಣದಲ್ಲಿ ಚಾಲನೆ ನೀಡಿದರು.ಕೃತಕವಾಗಿ ತಯಾರಿಸಲು ಸಾಧ್ಯವಾಗದ ರಕ್ತವನ್ನು ಮತ್ತೊಬ್ಬರಿಗೆ ನೀಡಿ ಜೀವ ಉಳಿಸುವಂಥ ಕೆಲಸ ನಿಜಕ್ಕೂ ಶ್ರೇಷ್ಠವಾಗಿದ್ದು, 18 ವರ್ಷ ತುಂಬಿದ ಎಲ್ಲಾ ಅರ್ಹರು ತಪ್ಪದೇ ರಕ್ತದಾನ ಮಾಡಬೇಕು ಎಂದು ಕರೆ ನೀಡಿದರು.ಜಿಲ್ಲೆಯಲ್ಲಿ ರಕ್ತದಾನ ಶಿಬಿರಗಳು ಕ್ಷೀಣಿಸುತ್ತಿದ್ದವು. ವರ್ಷವಾರು ನಿಗದಿತ ಗುರಿಗಿಂತ ಕಡಿಮೆ…

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಸಾರ್ವಜನಿಕರಿಗೆ ತುರ್ತು ಔಷಧಿಗಳು ಲಭ್ಯವಾಗಲಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಫೆಬ್ರುವರಿ.25:-ಆಸ್ಪತ್ರೆಗೆ ಬರುವ ಸಾಮಾನ್ಯ ಹಾಗೂ ಬಡ ರೋಗಿಗಳಿಗೆ ಅಗತ್ಯ ತುರ್ತು ಔಷಧಿಗಳು ಲಭ್ಯವಾಗುವಂತೆ ಆರೋಗ್ಯಾಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಇಂದು ಬೀದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹೊರ ರೋಗಿಗಳೊಂದಿಗೆ ಚರ್ಚಿಸಿದರು. ಹಾವು ಕಡಿತಕ್ಕೆ, ನಾಯಿ ಕಡಿತಕ್ಕೆ ಸೇರಿದಂತೆ ತುರ್ತು ಔಷಧಿಗಳನ್ನು ಲಭ್ಯವಾಗುವಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಶಂಕರ ಟಿ. ಅವರಿಗೆ ಸೂಚಿಸಿದರು.