ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಿರಿ–ಡಿ.ಸಿ. ಫೌಜಿಯಾ ತರನ್ನುಮ್

ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಿರಿ–ಡಿ.ಸಿ. ಫೌಜಿಯಾ ತರನ್ನುಮ್

ಕಲಬುರಗಿ,ಫೆ.21.(ಕ.ವಾ.” ರಾಜ್ಯದಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಬಹುದಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ-ಖಾತಾವನ್ನು ಪಡೆಯಬಹುದಾಗಿದೆ….

ಬೇಸಿಗೆಗೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರು..!

ಬೇಸಿಗೆಗೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರು..!

ಬೆಂಗಳೂರು,ಫೆ.21- ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರುವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಶ್ರೀಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಬಯಲುಸೀಮೆಯ ಪಾವಗಡ, ಹೊಳಲ್ಕೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡರೆ, ಉತ್ತರ ಕರ್ನಾಟಕ ಭಾಗದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ ಸೇರಿದಂತೆ ಹಲವಾರು ಜಿಲ್ಲೆಗಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಬಹುತೇಕ ಈ ಬಾರಿ ಉತ್ತಮ ಮಳೆಯಾಗಿದ್ದರಿಂದಾಗಿ ಹೆಚ್ಚಿನ ನೀರಿನ ಬವಣೆ ಕಾಣಿಸಿಕೊಂಡಿಲ್ಲ. ಕಳೆದ ಬೇಸಿಗೆಯಲ್ಲಿ 1700ಕ್ಕೂ ಹೆಚ್ಚಿನ ಗ್ರಾಮಗಳು…

ಕುಂಭಮೇಳದ ಬಗ್ಗೆ ತಪ್ಪು ಮಾಹಿತಿ: 53 – ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ

ಕುಂಭಮೇಳದ ಬಗ್ಗೆ ತಪ್ಪು ಮಾಹಿತಿ: 53 – ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ

ನವದೆಹಲಿ: ಮಹಾ ಕುಂಭ ಮೇಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ – ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶ ಪೊಲೀಸರು 53 ಸಾಮಾಜಿಕ ಮಾಧ್ಯಮ ಖಾತೆಗಳ • ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ನಕಲಿ ಸುದ್ದಿಗಳನ್ನು ನಿಗ್ರಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. – ಹಳೆಯ ವೀಡಿಯೊಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ – ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪ…

ನಂದಿನಿ ಹಾಲಿನ ದರ 5 ರೂ ಏರಿಕೆಗೆ ಕೆಎಂಎಫ್ ನಿಂದ ಪ್ರಸ್ತಾವ ಸಲ್ಲಿಕೆ

ನಂದಿನಿ ಹಾಲಿನ ದರ 5 ರೂ ಏರಿಕೆಗೆ ಕೆಎಂಎಫ್ ನಿಂದ ಪ್ರಸ್ತಾವ ಸಲ್ಲಿಕೆ

ಬೆಂಗಳೂರು,ಫೆ.20- ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಬೆಲೆ ಏರಿಕೆಯ ಅಂತಿಮ ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳದಲ್ಲಿದೆ. ಈಗಾಗಲೇ ಕೆಎಸ್‌ಆಲ್ಪಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ಹೆಚ್ಚಳಕ್ಕೆ ಮುಂದಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಹಾಲಿನ…

ಫೆಬ್ರವರಿ 24 ರಿಂದ ಕಲಬುರಗಿಯಲ್ಲಿ ರಾಷ್ಟ್ರಮಟ್ಟದ ಬೃಹತ್ ನಮ್ಮ ಸರಸ್ ಮೇಳ- 2025: 20 ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗಿ: ಮೇಳ ಯಶಸ್ಸಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಫೆಬ್ರವರಿ 24 ರಿಂದ ಕಲಬುರಗಿಯಲ್ಲಿ ರಾಷ್ಟ್ರಮಟ್ಟದ ಬೃಹತ್ ನಮ್ಮ ಸರಸ್ ಮೇಳ- 2025: 20 ರಾಜ್ಯಗಳ ಮಹಿಳಾ ಸ್ವ-ಸಹಾಯ ಗುಂಪುಗಳು ಭಾಗಿ: ಮೇಳ ಯಶಸ್ಸಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕಲಬುರಗಿ,ಫೆ.20:  ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಜಾತ್ರೆ ಮೈದಾನದಲ್ಲಿ ಇದೇ ಫೆಬ್ರವರಿ 24 ರಿಂದ ಮಾರ್ಚ್ 5ರ ವರೆಗೆ 10 ದಿನಗಳ ಕಾಲ ಮಹಿಳಾ ಸ್ವ-ಸಹಾಯ ಗುಂಪುಗಳು ತಯ್ಯಾರಿಸಿದ ವಸ್ತುಗಳ ಬೃಹತ್ ರಾಷ್ಟ್ರ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಸಲು ನಿರ್ಧರಿಸಿರುವ ಕಾರಣ ಕೂಡಲೆ ಮೇಳ ಯಶಸ್ಸಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಆಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು. ಬುಧವಾರ ಈ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ…

ಬೆಂಗಳೂರು ಓಪನ್‌ 2025: ವೈಲ್ಡ್‌ ಕಾರ್ಡ್‌ ಮೂಲಕ ಡ್ರಾಗೆ ಪ್ರವೇಶಿಸಿದ ಯುವ ಧಮ್ನೆ, ಅನುಭವಿ ರಾಮ್‌ ಕುಮಾರ್‌, ಪ್ರಜ್ವಲ್‌ ದೇವ್‌

ಬೆಂಗಳೂರು ಓಪನ್‌ 2025: ವೈಲ್ಡ್‌ ಕಾರ್ಡ್‌ ಮೂಲಕ ಡ್ರಾಗೆ ಪ್ರವೇಶಿಸಿದ ಯುವ ಧಮ್ನೆ, ಅನುಭವಿ ರಾಮ್‌ ಕುಮಾರ್‌, ಪ್ರಜ್ವಲ್‌ ದೇವ್‌

ಬೆಂಗಳೂರು, ಫೆಬ್ರವರಿ 21: ಕಬ್ಬನ್‌ ಪಾರ್ಕ್‌ನ ಕೆಎಸ್‌ಎಲ್‌ ಟಿಎ ಕೋರ್ಟ್‌ನಲ್ಲಿಫೆಬ್ರವರಿ 24ರಿಂದ ಮಾರ್ಚ್‌ 2ರವರೆಗೆ ನಡೆಯಲಿರುವ ಎಟಿಪಿ ಚಾಲೆಂಜರ್‌ 125 ಟೂರ್ನಿಯ 9ನೇ ಆವೃತ್ತಿಯ ರೋಚಕ ಟೂರ್ನಿಯಲ್ಲಿಭಾರತದ 17 ವರ್ಷದ ಪ್ರತಿಭೆ ಮಾನಸ್‌ ಧಮ್ನೆ ಮತ್ತು ಅನುಭವಿ ಪ್ರಚಾರಕರಾದ ರಾಮ್‌ ಕುಮಾರ್‌ ರಾಮನಾಥನ್‌ ಮತ್ತು ಎಸ್‌.ಡಿ. ಪ್ರಜ್ವಲ್‌ ದೇವ್‌ ಅವರು ವೈಲ್ಡ್‌ ಕಾರ್ಡ್‌ಗೆ ಪ್ರವೇಶ ಪಡೆದಿದ್ದಾರೆ. ಏತನ್ಮಧ್ಯೆ, ಕ್ರಿಶ್‌ ತ್ಯಾಗಿ ಮತ್ತು ನಿಕಿ ಕಲಿಯಂಡ ಪೂಣಚ್ಚ ಅರ್ಹತಾ ಸುತ್ತಿನಲ್ಲಿ ವೈಲ್ಡ್‌ ಕಾರ್ಡ್‌ ಪ್ರವೇಶಿತರಾಗಿ  ಸ್ಪರ್ಧಿಸಲಿದ್ದು, ಮುಖ್ಯ ಡ್ರಾದಲ್ಲಿಸ್ಥಾನ…

ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ಮಹತ್ವಾಕಾಂಕ್ಷೆ ಜಿಲ್ಲೆ ಪ್ರಗತಿ ಪರಿಶೀಲನಾ ಸಭೆ ಯೋಜನೆಯ ಕಾರ್ಯಕ್ರಮಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಿ; ಜಂಟಿ ಕಾರ್ಯದರ್ಶಿ ಸಮೀರ್ ಶುಕ್ಲಾ

ರಾಯಚೂರು ಫೆ 21: ದೇಶದ ಪ್ರಧಾನಮಂತ್ರಿ ವಿಶೇಷ ಕಾರ್ಯಕ್ರಮಗಳಲ್ಲಿ ಒಂದಾದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳನ್ನು ಜಿಲ್ಲೆಯಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳ್ಳಿಸಬೇಕೆಂದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ ಅವರು ಹೇಳಿದರು.    ಫೆ.21ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಸಿ ಮಾತನಾಡಿದರು.  ದೇಶದ ಹಿಂದುಳಿದ 112 ಜಿಲ್ಲೆಗಳಲ್ಲಿ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆ 2018ರಲ್ಲಿ ಜಾರಿಗೊಂಡಿದ್ದು,…

ಯಾದಗಿರಿ: ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವಂತೆ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ , ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ, ದಿನನಿತ್ಯ ಬೆಲೆ ಏರಿಕೆ ಮತ್ತು ಶಾಕ್ ನೀಡುವುದರಲ್ಲಿ ಮಾತ್ರ ಕಾರ್ಯ ಕಾರ್ಯನಿರತವಾಗಿದೆ ಹೊರತು ರಾಜ್ಯದಲ್ಲಿ ಯಾರ…