ಯಾದಗಿರಿ: ಕಳೆದ ಹಲವು ದಿನಗಳಿಂದ ಅನಿರ್ದಿಷ್ಟಾವಧಿಗೆ ತಮ್ಮ ನ್ಯಾಯಯುತ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಗ್ರಾಮ ಲೆಕ್ಕಾಧಿಕಾರಿಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸುವಂತೆ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ , ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿ, ದಿನನಿತ್ಯ ಬೆಲೆ ಏರಿಕೆ ಮತ್ತು ಶಾಕ್ ನೀಡುವುದರಲ್ಲಿ ಮಾತ್ರ ಕಾರ್ಯ ಕಾರ್ಯನಿರತವಾಗಿದೆ ಹೊರತು ರಾಜ್ಯದಲ್ಲಿ ಯಾರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ಕಿಡಿಕಾರಿದರು.
ರಾಜ್ಯದ ಕಂದಾಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರ ಗ್ರಾಮ ಆಡಳಿತ ಅಧಿಕಾರಿಗಳು ಮುಂದಿಟ್ಟಿದ್ದ ಭೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು ಆದರೆ ಸರ್ಕಾರ ಭೇಡಿಕೆಗಳನ್ನು ಈಡೇರಿಸದಿರುವುದರಿಂದ ಇಂದು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದೋಗಿದೆ.
ಕಂದಾಯ ಇಲಾಖೆಯಲ್ಲಿ ಜನಸಾಮಾನ್ಯರ ನೋವು, ನಲಿವುಗಳಿಗೆ ದಿನವಿಡೀ ಸ್ಪಂದಿಸುವ ಜೀವವೆಂದರೆ ಅದು ಗ್ರಾಮ ಲೆಕ್ಕಾಧಿಕಾರಿಗಳು ಆದರೆ ಇಂದು ಎಲ್ಲಾ ವಿಭಾಗಗಳಿಂದ ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿರುವವರು ಇದೇ ಗ್ರಾಮ ಲೆಕ್ಕಾಧಿಕಾರಿಗಳು. ಇವತ್ತು ಅದೆಷ್ಟೋ ಭಾರೀ ರಾಜ್ಯ ಸರ್ಕಾರ ಹಾಗೂ ಜನಪ್ರತಿನಿದಿಗಳಿಗೆ ಮತ್ತು ಮೇಲ್ಮಟ್ಟದ ಅಧಿಕಾರಿಗಳ ಬಳಿ ತಮ್ಮ ಸಮಸ್ಯೆ ತಿಳಿಸಿ ಅದನ್ನು ಪರಿಹರಿಸಲು ಕೇಳಿಕೊಂಡಾಗಲೂ ಸಹ ಪರಿಹಾರ ಕಾಣದೆ ಇದ್ದಾಗ ಇಂದು ಗ್ರಾಮ ಲೆಕ್ಕಾಧಿಕಾರಿಗಳು ಅನಿವಾರ್ಯವಾಗಿ ಅನಿರ್ದಿಷ್ಟಾವದಿ ಧರಣಿ ಕುಳಿತುಕೋಳ್ಳವಂತಾಗಿದೆ ಎಂದರು.
ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನೆಯಿಂದ ಕಂದಾಯ ಇಲಾಖೆಯ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿದ್ದು ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದ್ದು, ಗ್ರಾಮ ಲೆಕ್ಕಾಧಿಕಾರಿಗಳು ಗ್ರಾಮ ಮಟ್ಟದಲ್ಲಿ ಸರ್ಮಪಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಅವರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳಾದ ಸುಸಜ್ಚಿತವಾದ ಕಚೇರಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಅಲ್ಮೇರಾ ಅತ್ಯುತ್ತಮ ಗುಣಮಟ್ಟದ ಮೋಬೈಲ್ ಪೋನ್ ಗೋಗೆಲ್ ಕ್ರೋಮ್ ಬುಕ್ ಲ್ಯಾಪ್ ಟಾಪ್. ಫ್ರೀಂಟರ್ ಮತ್ತು ಸ್ಕ್ಯಾನರ್ ಸೇರಿದಂತೆ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೆರಿಸಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.
