June 17, 2025 12:38 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಸುದ್ದಿ » ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲ್ಯಾಣ ಕರ್ನಾಟಕಕ್ಕೆ ಶಿಕ್ಷಕರ ನೇಮಕಾತಿ ಆಗಿದೆ ಒಳ ಮೀಸಲಾತಿಯಿಂದ ನೇಮಕಾತಿಗೆ ವಿಳಂಬ-ಡಾ.ಶರಣಪ್ರಕಾಶ ಪಾಟೀಲ

ಕಲಬುರಗಿ,10.ಮೇ.25-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ 5,530 ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ  ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.
ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಸ್.ಎಲ್. ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆಯೆ ಪ್ರಮುಖ ಕಾರಣ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಒಳ ಮೀಸಲಾತಿ ಸಮೀಕ್ಷೆ ನಂತರ ಶಿಕ್ಷಕರ ನೇಮಕಾತಿಯಾಗಿ ಸಮಸ್ಯೆ ಬಗೆಹರಿಯಲಿದೆ. ಖಾಯಂ ಶಿಕ್ಷಕರು ಇಲ್ಲದಕ್ಕಾಗಿಯೇ ಅತಿಥಿ ಶಿಕ್ಷಕರ ನೇಮಕಾತಿಯಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ 2025-26ನೇ ಆರ್ಥಿಕ ಸಾಲಿಗೆ 5,000 ಕೋಟಿ ರೂ. ಅನುದಾನ ನೀಡಿದ್ದು, ಈ ಅನುದಾನ ಸಮರ್ಪಕ ಖರ್ಚು ಮಾಡಲು ಕೂಡಲೆ ಕ್ರಿಯಾ ಯೋಜನೆ ರೂಪಿಸಿ ಅನುಷ್ಠಾನ ತರಲು ಕೆಲಸ ಕಾರ್ಯಗಳಿಗೆ ಚಾಲನೆ ನೀಡಲು ಇಂದು ಮಂಡಳಿ ಸಭೆ ಕರೆಯಲಾಗಿದೆ ಎಂದರು.
ಇನ್ನು ಮಂಡಳಿಯಿoದಲೆ ಪ್ರತ್ಯೇಕ ಇಂಜಿನೀಯರಿoಗ್ ವಿಂಗ್ ಸ್ಥಾಪನೆ ಕುರಿತಂತೆ ಮಾತನಾಡಿದ ಸಚಿವರು  ಮಂಡಳಿಯಿoದ ವಿಂಗ್ ಅದು ಮತ್ತೊಂದು ಇಲಾಖೆಯಾಗಿ ಹೊರಹೊಮ್ಮುತ್ತೆ ವಿನ: ಸಮಸ್ಯೆಗೆ ಅದುವೇ ಮುಕ್ತಿ ಅಲ್ಲ. ಪ್ರಸ್ತುತ ಇರುವ ಲೋಕೋಪಯೋಗಿ, ಅರ್.ಡಿ.ಪಿ.ರ್., ನಿರ್ಮಿತಿ ಕೇಂದ್ರ, ಲ್ಯಾಂಡ್ ಆರ್ಮಿ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಬಳಸಿಕೊಂಡಲ್ಲಿ ಕೆಲಸದ ವೇಗ ಹೆಚ್ಚಲಿದೆ. ಹೀಗಾಗಿ ಎಲ್ಲಾ ಇಲಾಖೆಗಳಿಗೆ ಕೆಲಸ ಹಂಚಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ, ಕೆ.ಕೆ.ಅರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣು ಮೋದಿ, ಮುಖಂಡ ನೀಲಕಂಠ ಮೂಲಗೆ ಇದ್ದರು.


ಕಲ್ಯಾಣ ಕರ್ನಾಟಕದಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಕ್ರಮ
ಜೂನ್ 1 ರಿಂದ ಜಿಲ್ಲೆಗಳಲ್ಲಿ 1 ಲಕ್ಷ ಎತ್ತರ ಸಸಿ ನೆಡಲು ಯೋಜನೆಗೆ ಚಾಲನೆ
-ಈಶ್ವರ ಖಂಡ್ರೆ
ಕಲಬುರಗಿ,ಮೇ.10-ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳು ಶೇ.10ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆಗಳ ಪಟ್ಟಿಯಲ್ಲಿದ್ದು, ಇಲ್ಲಿ ಹಸಿರು ಹೊದಿಕೆ ಹೆಚ್ಚಿಸಲು ಬರುವ ಜೂನ್ 1 ರಿಂದ ಒಂದು ಲಕ್ಷ ಸಸಿ ನಡೆಯಲು ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಶನಿವಾರ ಕಲಬುರಗಿಯ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ-ಶೇ.5, ಬಳ್ಳಾರಿ-ಶೇ.7, ಯಾದಗಿರಿ ಮತ್ತು ರಾಯಚೂರು ತಲಾ ಶೇ.3ರಷ್ಟು ಮಾತ್ರ ಅರಣ್ಯ ಪ್ರದೇಶ ಇದೆ. ಹೀಗಾಗಿ ಜೂನ್ 1 ರಿಂದ ಈ ನಾಲ್ಕು ಜಿಲ್ಲೆಗಳಲ್ಲಿ ವಿಶೇಷವಾಗಿ ರಸ್ತೆ ಬದಿಯಲ್ಲಿ 1 ಲಕ್ಷ ಸಸಿ ನೆಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದ ಅವರು, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮುಂದಿನ  10-15 ವರ್ಷದಲ್ಲಿ 10-20 ರಷ್ಟು ಅರಣ್ಯ ಪ್ರಮಾಣ ಹೆಚ್ಚಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು.

ಡಿಸೆoಬರ್ ಅಂತ್ಯಕ್ಕೆ ಮಾಡಬೂಳ ಪ್ರಾಣಿ ಸಂಗ್ರಹಾಲಯ ಲೋಕಾರ್ಪಣೆ: ಚಿತ್ತಾಪುರ ಕ್ಷೇತ್ರದ ಮಾಡಬೂಳದಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಸುಮಾರು 40 ಎಕರೆ ಪ್ರದೇಶದಲ್ಲಿ ಸ್ಥಾಪಿಸಲಾಗುತ್ತಿರುವ ಪ್ರಾಣಿ ಸಂಗ್ರಹಾಲಯ ಕಾರ್ಯ ಭರದಿಂದ ಸಾಗಿದ್ದು, ಇಂದು ಕಾಮಗಾರಿ ವೀಕ್ಷಿಸಿದ್ದೇನೆ. ಡಿಸೆಂಬರ್ ಅಂತ್ಯದೊಳಗೆ ಇದನ್ನು ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಪ್ರಾಣಿ ಸಂಗ್ರಹಾಲಯ ಸ್ಥಾಪನೆಯಾದ ನಂತರ ಹುಲಿ, ಸಿಂಹ, ಚಿರತೆ ಸೇರಿದಂತೆ ಅನೇಕ ಪ್ರಾಣಿಗಳ ವೀಕ್ಷಣೆಯ ಅವಕಾಶ ದೊರೆಯಲಿದೆ. ಇಲ್ಲಿನ ಸಿಬ್ಬಂದಿಗಳಿಗೆ ಮೈಸೂರು, ಬನ್ನೇರುಘಟ್ಟದಲ್ಲಿ ತರಬೇತಿ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ  ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಕೆ.ಕೆ.ಅರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್, ಶಾಸಕ ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣು ಮೋದಿ, ಮುಖಂಡ ನೀಲಕಂಠ ಮೂಲಗೆ ಇದ್ದರು.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price