June 17, 2025 12:41 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

Home » ಕೊಪ್ಪಳ » ಕೊಪ್ಪಳ ಸುದ್ದಿ

ಕೊಪ್ಪಳ ಸುದ್ದಿ

ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ : ಮೇ 22ರವರೆಗೆ ಮದ್ಯ ಮಾರಾಟ ನಿಷೇಧ
ಕೊಪ್ಪಳ ಮೇ 21 : ಕೊಪ್ಪಳ ತಾಲ್ಲೂಕಿನ ಹುಲಿಗಿ ಗ್ರಾಮದಲ್ಲಿ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಜಾತ್ರೆ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ  ಮೇ 22 ರ ಬೆಳಿಗ್ಗೆ 06 ಗಂಟೆಯವರೆಗೆ ಹುಲಿಗಿ ಹಾಗೂ ಹುಲಿಗಿ ಗ್ರಾಮದ ಸುತ್ತಲಿನ 5 ಕಿ.ಮೀ ವ್ಯಾಪ್ತಿಯವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಲಿಲ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸಿದೆ. ಈ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಗ್ರಾ.ಪಂ. ಉಪ ಚುನಾವಣೆ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಕೊಪ್ಪಳ ಮೇ 21 : ಕೊಪ್ಪಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳಿಗೆ ಮೇ 25 ರಂದು ನಡೆಯಲಿರುವ ಉಪ ಚುನಾವಣೆಯ ನಿಮಿತ್ತ ಮತದಾನವನ್ನು ನ್ಯಾಯ ಸಮ್ಮತ ಹಾಗೂ ಶಾಂತಿಯುತವಾಗಿ ಕೈಗೊಳ್ಳಲು ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರ ಪ್ರಕಾರ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ ಚುನಾವಣೆ ನಡೆಯುವ ಕೊಪ್ಪಳ ತಾಲ್ಲೂಕಿನ ಕವಲೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮೇ 23 ರ ಸಂಜೆ 05 ಗಂಟೆಯಿAದ ಮೇ 25 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು ಮತ್ತು ಅಬಕಾರಿ ವೃತ್ತ ನಿರೀಕ್ಷಕರನ್ನೊಳಗೊಂಡ ತನಿಖಾ ತಂಡವನ್ನು ರಚಿಸಿ ಕಾರ್ಯನಿರ್ವಹಿಸಲು ಆದೇಶಿಸಿದೆ. ಆದೇಶವನನು ಜಾರಿಗೆ ತರುವಲ್ಲಿ ನಿರ್ಲಕ್ಷತನವನ್ನು ತೋರಿದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಉತ್ತಮ ಮೌಲ್ಯಗಳಿಗೆ ಬೆಲೆ ಕೊಡಬೇಕು: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ ಮೇ 21 : ಉತ್ತಮ ಮೌಲ್ಯಗಳಿಗೆ ಬೆಲೆ ಕೊಡುವ ಮೂಲಕ  ವಿಚ್ಚಿದ್ರಕಾರಿ ಮನಸ್ಥಿತಿಯಿಂದ  ನಾವು ದೂರ ಇರಬೇಕಿದೆ ಎಂದು  ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿ ಮಾತನಾಡಿದರು.
ನಮ್ಮ ಎದುರಿನಲ್ಲಿ ನಡೆಯುವ ಯಾವುದೇ ಅಹಿತಕರ ಘಟನೆಗಳನ್ನು ನಾವು ನೋಡಿಕೊಂಡು ಸುಮ್ಮನೆ ನಿಲ್ಲುವುದು ಅಪರಾಧವಾದಂತೆ. ಅವುಗಳು ನಡೆಯದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದಾಗಿದೆ.  ಗಾಂಧೀಜಿಯವರು  ಹುಟ್ಟಿದ ನಾಡು ನಮ್ಮದು ನಾವು ಶಾಂತಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.
ಪ್ರತಿವರ್ಷ ಮೇ. 21 ರಂದು ಭಯೋತ್ಪಾದನಾ ವಿರೋಧಿ ದಿನ ಆಚರಿಸುವ ಉದ್ದೇಶ ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ದ ಹೋರಾಡಲು ನಾವೆಲ್ಲರೂ ಪಣ ತೊಡುವುದಾಗಿದೆ  ಎಂದರು.
ಅಹಿAಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟçದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲರ ಶಕ್ತಿ ಸಾಮರ್ಥ್ಯದಿಂದ ಎದುರಿಸಬೇಕಿದೆ. ನಮ್ಮ ಭಾರತವು  ವೈವಿಧ್ಯಮಯದಿಂದ ಕೂಡಿದ ನಾಡಾಗಿದ್ದು, ನಾವೆಲ್ಲರೂ ಪರಸ್ಪರ ಸ್ನೇಹ ಹಾಗೂ ಸೌಹಾರ್ದತೆಯಿಂದ ಬಾಳಬೇಕಿದೆ ಎಂದು ಹೇಳಿದರು.
ಈ ಸಂದರ್ಭ ಕೊಪ್ಪಳ ಜಿಲ್ಲಾಡಳಿತ ಭವನದ  ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕುಕನೂರು ಪ.ಪಂ: ಐ.ಇ.ಸಿ ಚಟುವಟಿಕೆ ಕೈಗೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನ
ಕೊಪ್ಪಳ ಮೇ 21 : ಕುಕನೂರು ಪಟ್ಟಣ ಪಂಚಾಯತಿಯ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚ ಭಾರತ್ ಮಿಷನ್(ನ)-2.0 ಗೆ ಸಂಬAಧಿಸಿದ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪುಗಳ ಸದಸ್ಯರ ನೇಮಕಾತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುಕನೂರು ಪಟ್ಟಣ ಪಂಚಾಯತಿಯಲ್ಲಿ 3 ವರ್ಷಗಳ ಜೊತೆಗೆ ಪೂರ್ಣಾವಧಿಗೆ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಲು ನಲ್ಮ್-ಡೇ ಅಡಿಯಲ್ಲಿ ನೋಂದಾಯಿಸಿದ ಸ್ವಸಹಾಯ ಗುಂಪಿನ ಸದಸ್ಯರು ಅರ್ಜಿ ಸಲ್ಲಿಸಬಹುದು. ಆಯ್ಕೆ ಪ್ರಕ್ರಿಯೆ ಹಾಗೂ ಗೌರವಧನಕ್ಕೆ ಸಂಬAಧಿಸಿದ ವಿವರಗಳನ್ನು ಪಟ್ಟಣ ಪಂಚಾಯತಿ ಕಾರ್ಯಾಲಯದ ಆರೋಗ್ಯ ಶಾಖೆಯಲ್ಲಿ ಪಡೆಯಬಹುದು.
ಪಟ್ಟಣ ಪಂಚಾಯತಿ ಕಾರ್ಯಾಲಯದಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿಮಾಡಿ ಗುರುತಿನ ಪುರಾವೆ, ವಿಳಾಸದ ಪುರಾವೆ, ಅರ್ಹತಾ ಪಟ್ಟಿಯಲ್ಲಿ ನೋಂದಾಯಿಸಿಕೊAಡಿರುವುದಕ್ಕೆ (ಎಂಪ್ಯಾನಲ್) ದಾಖಲೆಗಳು, ಶೈಕ್ಷಣಿಕ ಅರ್ಹತೆ, ನಲ್ಮ್-ಡೇಯ ಹಿಂಬರಹದ ನಮೂನೆಯೊಂದಿಗೆ ಜೂನ್ 05 ರ  ಸಂಜೆ 5 ಗಂಟೆಯ ಒಳಗಾಗಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ಪಟ್ಟಣ ಪಂಚಾಯತಿಯ ಅಧಿಕೃತ ಇ-ಮೇಲ್ ವಿಳಾಸ  iಣsಣಚಿಜಿಜಿ uಟb ಞuಞಚಿಟಿooಡಿ@ಥಿಚಿhoo.ಛಿom ಕ್ಕೆ ಅರ್ಜಿಯನ್ನು ಕಳುಹಿಸಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ವಿಷಯದ ಕುರಿತು ಅವರ ತಿಳುವಳಿಕೆಯನ್ನು ನಿರ್ಣಯಿಸಲು ಸಂದರ್ಶನಕ್ಕೆ ಕರೆಯಲಾಗುವುದು ಎಂದು ಪ.ಪಂ. ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಪಾಶುವಾರು ಹಕ್ಕು : ಮೀನುಗಾರರ ಸಹಕಾರ ಸಂಘಗಳಿAದ ಅರ್ಜಿ ಆಹ್ವಾನ
ಕೊಪ್ಪಳ ಮೇ 21.: ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕನ್ನು ಪಡೆಯಲು ಅರ್ಹ ಮೀನುಗಾರರ ಸಹಕಾರ ಸಂಘ/ಎಫ್.ಎಫ್.ಪಿ.ಒ(ಸoಸ್ಥೆ) ಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಮೀನುಗಾರಿಕೆ ಫಸಲಿ ವರ್ಷದಿಂದ 2029-30ನೇ ಮೀನುಗಾರಿಕೆ ಫಸಲಿ ವರ್ಷದವರೆಗೆ( ದಿನಾಂಕ: 01-07-2025 ರಿಂದ ದಿ: 30-06-2030 ರವರೆಗೆ) ಗರಿಷ್ಠ 05 ವರ್ಷಗಳ ಅವಧಿಗೆ ಸರ್ಕಾರದ ನಿಯಮಗಳ ಮೇರೆಗೆ ಅರ್ಹ ಮೀನುಗಾರರ ಸಹಕಾರ ಸಂಘಕ್ಕೆ ನೀಡಲಾಗುವುದು. ಕುಷ್ಟಗಿ ತಾಲ್ಲೂಕಿನ ಮುದ್ದಲಗುಂದಿ ಕೆರೆ, ವಿರುಪಾಪುರ ಕೆರೆ, ಹನುಮಗೇರಾ ಕೆರೆ, ಮೆಣಸಗೇರಾ ಕೆರೆ, ಕಲಾಲಬಂಡಿ ಕೆರೆ, ಮಿಯಾಪುರ ಹಾಗೂ ಜಾಗೀರಗುಡದೂರ ಕೆರೆ ಜಲಸಂಪನ್ಮೂಲಗಳನ್ನು ವಿಲೇವಾರಿ ಮಾಡಲು ಸರ್ಕಾರದಿಂದ ಪ್ರಸ್ತಾಪಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು, ಅರ್ಹ ಮತ್ತು ಆಸಕ್ತ ಮೀನುಗಾರರ ಸಹಕಾರ ಸಂಘದವರು ನಿಗದಿತ ನಮೂನೆಯಲ್ಲಿ ಅಂದು ಸಂಜೆ 05 ಗಂಟೆಯೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಬಿ.ಬಿ.ನಗರ, ಕುಷ್ಟಗಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕುಷ್ಟಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ವಿಶೇಷ ಶಾಲೆಗಳಿಗೆ ಪ್ರವೇಶ ಪ್ರಾರಂಭ
ಕೊಪ್ಪಳ ಮೇ 21: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಡಿ ಕಾರ್ಯ ನಿರ್ವಹಿಸುತ್ತಿರುವ ವಿಶೇಷ ಶಾಲೆಗಳಿಗೆ 2025-26ನೇ ಸಾಲಿನ ಪ್ರವೇಶ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ನಾದಬಿಂದು ಶ್ರವಣ ನ್ಯೂನ್ಯತೆವುಳ್ಳ (ಮೂಕ ಮತ್ತು ಕಿವುಡ) ಮಕ್ಕಳ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಹಾಗೂ ಮಾನಸ ಬುದ್ದಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಪ್ರಸಕ್ತ ಸಾಲಿಗೆ ಪ್ರವೇಶ ಪ್ರಾರಂಭವಾಗಿದ್ದು, ಉಚಿತ ಊಟ, ವಸತಿ, ಸಮವಸ್ತç ಹಾಗೂ ಪುಸ್ತಕಗಳು ಮತ್ತು ಇನ್ನಿತರ ಮುಲಭೂತ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ.
ಈ ಶಾಲೆಗಳಲ್ಲಿ ವಿಶೇಷ ಶಿಕ್ಷಣದಲ್ಲಿ ತರಬೇತಿ ಪಡೆದ ನುರಿತ ಅನುಭವಿ ಶಿಕ್ಷಕರಿಂದ ಮಕ್ಕಳಿಗೆ ವಿಶೇಷ ಶಿಕ್ಷಣ ಮತ್ತು ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ದ್ವಿ.ದ.ಸ. ಬಸವರಾಜ ಮೊ. ಸಂಖ್ಯೆ: 9900369336 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಂಗಾವತಿ: ಮೀನುಗಾರರ ಸಹಕಾರ ಸಂಘಗಳಿAದ ಅರ್ಜಿ ಆಹ್ವಾನ
ಕೊಪ್ಪಳ ಮೇ 21 : ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಜಲಸಂಪನ್ಮೂಲಗಳ ಮೀನುಪಾಶುವಾರು ಹಕ್ಕನ್ನು ಪಡೆಯಲು ಅರ್ಹ ಮೀನುಗಾರರ ಸಹಕಾರ ಸಂಘ/ಎಫ್.ಎಫ್.ಪಿ.ಒ(ಸAಸ್ಥೆ) ಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಮೀನುಗಾರಿಕೆ ಫಸಲಿ ವರ್ಷದಿಂದ 2029-30ನೇ ಮೀನುಗಾರಿಕೆ ಫಸಲಿ ವರ್ಷದವರೆಗೆ( ದಿನಾಂಕ: 01-07-2025 ರಿಂದ ದಿ: 30-06-2030 ರವರೆಗೆ) ಗರಿಷ್ಠ 05 ವರ್ಷಗಳ ಅವಧಿಗೆ ಸರ್ಕಾರದ ನಿಯಮಗಳ ಮೇರೆಗೆ ಅರ್ಹ ಮೀನುಗಾರರ ಸಹಕಾರ ಸಂಘಕ್ಕೆ ನೀಡಲಾಗುವುದು. ಗಂಗಾವತಿ ತಾಲ್ಲೂಕಿನ ಇಂಗಳದಾಳ ಕೆರೆ ಮತ್ತು ಕರಡೋಣ ಕೆರೆ ಜಲಸಂಪನ್ಮೂಲಗಳನ್ನು ವಿಲೇವಾರಿ ಮಾಡಲು ಸರ್ಕಾರದಿಂದ ಪ್ರಸ್ತಾಪಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದ್ದು, ಅರ್ಹ ಮತ್ತು ಆಸಕ್ತ ಮೀನುಗಾರರ ಸಹಕಾರ ಸಂಘದವರು ನಿಗದಿತ ನಮೂನೆಯಲ್ಲಿ ಅಂದು ಸಂಜೆ 05 ಗಂಟೆಯೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಜಿಲ್ಲಾ ರೈತ ತರಬೇತಿ ಆವರಣ, ವಡ್ಡರಹಟ್ಟಿ ಕ್ಯಾಂಪ್, ಗಂಗಾವತಿ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬಹುದು. ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Facebook
X
WhatsApp
Telegram

Leave a Reply

Your email address will not be published. Required fields are marked *

Cricket Live

Stock Market

Astrology

Gold & Silver Price