ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ), ಬೆಂಗಳೂರು ಇದರ ಚುನಾವಣೆಯು 14-12-2025 ರಂದು ಯಶಸ್ವಿಯಾಗಿ ನಡೆಯಿತು. ಈ ಚುನಾವಣೆಯಲ್ಲಿ ಮೈಸೂರ್ ಮೂಲದ ಶ್ರೀ ಸಿ. ರಾಮೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬೀದರನಿ ವೀರಶೆಟ್ಟಿ ಖ್ಯಾಮ ಅವರು ಉಪಾಧ್ಯಕ್ಷರಾಗಿ, ಬೆಳಗಾವಿಯ ಹರೀಶ್ ಪಾಟೀಲ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದೇ ವೇಳೆ ಕಲಬುರ್ಗಿ ಜಿಲ್ಲೆಯ ಶಿವಕುಮಾರ್ ಕಿಲ್ಲಿ ಹಾಗೂ ರಫಿಕ್ ಅಹ್ಮದ್ ಅವರು ಎಂಸಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.




ಚುನಾವಣೆಯಲ್ಲಿ ಜಯಗಳಿಸಿ ಸಂಘದ ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದ ಎಲ್ಲರಿಗೂ ಕಾಶಿನಾಥ್ ಮೆಂತೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅವರು ಕಲಬುರ್ಗಿ ಜಿಲ್ಲಾ ಸಮಿತಿಯ ಮಾಜಿ ಕಾರ್ಯದರ್ಶಿ ಹಾಗೂ ಬೆಂಗಳೂರು ಕಾರ್ಯಕಾರಿ ಸಮಿತಿಯ ಮಾಜಿ ಸದಸ್ಯರಾಗಿದ್ದು, ನೂತನ ನಾಯಕತ್ವದಡಿ ಸಂಘವು ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ, ರಾಜ್ಯದ ವಿದ್ಯುತ್ ಗುತ್ತಿಗೆದಾರರ ಹಿತಾಸಕ್ತಿಗಳನ್ನು ಸಮರ್ಥವಾಗಿ ಕಾಪಾಡಲಿ ಎಂದು ಶುಭಾಶಯ ಕೋರಿದ್ದಾರೆ.







Users Today : 2
Users Yesterday : 5
Users Last 7 days : 44