ಅಬ್ಬೆತುಮಕೂರು ಸಿದ್ದಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಇಂದು

ಅಬ್ಬೆತುಮಕೂರು ಸಿದ್ದಿ ಪುರುಷ ವಿಶ್ವಾರಾಧ್ಯರ ರಥೋತ್ಸವ ಇಂದು

ಯಾದಗಿರಿ: ಸುಕ್ಷೇತ್ರ ಅಬ್ಬೆತುಮಕೂರಿನ ಸಿದ್ಧಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ ಇಂದು  ಸಂಜೆ 6:30ಕ್ಕೆ ಸಡಗರದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಡಾ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ. ಪೀಠಾಧಿಪತಿ ಡಾ.ಗಂಗಾಧರ ಮಹಾಸ್ವಾಮಿಗಳು ತೇರಿಗೆ ವಿಶೇಷ ಪೂಜೆಯನ್ನು ನೆರವೇರಿಸಿ,ಉತ್ಸವ ಮೂರ್ತಿಯೊಂದಿಗೆ ಶ್ರೀಗಳು ರಥವನ್ನು ಏರಿದ  ಕೂಡಲೇ ಭಕ್ತಾದಿಗಳು ಸಡಗರದಿಂದ ರಥವನ್ನು ಎಳೆದು ಸಂಭ್ರಮ ಪಡುವರು. ರಾತ್ರಿ 8:00 ಗಂಟೆಗೆ ಮಾನವ ಧರ್ಮ ಸಮಾವೇಶ ನಡೆಯುವುದು. ಶ್ರೀಶೈಲ ಪೀಠದ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಮಾವೇಶದ ಪಾವನ ಸಾನಿಧ್ಯವನ್ನು…

ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ : ನಿರುಪಯುಕ್ತ ಸಮಾಗ್ರಿಗಳ ಬಹಿರಂಗ ಹರಾಜು ಆಹ್ವಾನ

ಯಾದಗಿರಿ : 03 ಮಾರ್ಚ್ 25 : ಯಾದಗಿರಿ ನಗರದ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಕಛೇರಿ ವತಿಯಿಂದ ನಿರುಪಯುಕ್ತ ಸಾಮಾಗ್ರಿಗಳನ್ನು ಬಹಿರಂಗ ಹರಾಜು ಪ್ರಕ್ರಿಯೆಯನ್ನು 2025ರ ಮಾರ್ಚ್ 7 ರಂದು ಬೆಳಿಗ್ಗೆ 10 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಸಮಾದೇಷ್ಟರು ಗೃಹ ರಕ್ಷಕ ದಳ ಯಾದಗಿರಿ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಧರಣೇಶ ಎಸ್.ಪಿ ಅವರು ತಿಳಿಸಿದ್ದಾರೆ.     ನಿರುಪಯುಕ್ತ ಸಾಮಗ್ರಿಗಳನ್ನು ಗೃಹರಕ್ಷಕ ದಳ ಕಛೇರಿಯಲ್ಲಿ, ಕಛೇರಿ ಸಮಯದಲ್ಲಿ ವೀಕ್ಷಿಸಬಹುದಾಗಿರುತ್ತದೆ. ಈ…

ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ
|

ಬೇಸಿಗೆ ದಿನಗಳಲ್ಲಿ ಆರೋಗ್ಯ ಇಲಾಖೆಯಿಂದ ನೀಡಲಾದ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಲು ಸೂಚನೆ

ಕಲಬುರಗಿ,3.ಮಾ.25. -ಪ್ರಸ್ತುತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಟೋಕನಿಂದಾಗಿ ಸಾರ್ವಜನಿಕರಿಗೆ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದ್ದು, ಆದ್ದರಿಂದ ಎಲ್ಲಾ ಸಾರ್ವಜನಿಕರು ಆರೋಗ್ಯ ಇಲಾಖೆಯಿಂದ ನೀಡಲಾದ ಈ ಕೆಳಕಂಡAತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸಲಹೆ ನೀಡಿದ್ದಾರೆ.   ಸಾರ್ವಜನಿಕರು ವಿಶೇಷವಾಗಿ ಮಧ್ಯಾಹ್ನ 12 ರಿಂದ ಮಧ್ಯಾಹ್ನ…

ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!
|

ಷೇರುಪೇಟೆಯಲ್ಲಿ ಭಾರೀ ಕರೆಕ್ಷನ್ : ‘ಮಾರುಕಟ್ಟೆ ಇಲ್ಲಿಂದ ಎಲ್ಲಿಗೆ ಹೋಗುತ್ತದೆ ಎಂದು ನನಗೆ ತಿಳಿದಿಲ್ಲ’ ; ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌!

Zerodha Founder Nithin Kamath : ದೇಶೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕರೆಕ್ಷನ್ ಶುರುವಾಗಿದ್ದು, ಬಿಎಸ್‌ಇ ಸೆನ್ಸೆಕ್ಸ್‌ ಫೆಬ್ರವರಿ ತಿಂಗಳಿನಲ್ಲಿ ಬರೋಬ್ಬರಿ 4000 ಪಾಯಿಂಟ್ಸ್ ನಷ್ಟಗೊಂಡಿದೆ. ಷೇರುಗಳ ಮೌಲ್ಯದಲ್ಲಿ ಭಾರೀ ನಷ್ಟದ ಪರಿಣಾಮ ಬಿಎಸ್‌ಇ ಮಾರ್ಕೆಟ್‌ ಕ್ಯಾಪ್‌ 40 ಲಕ್ಷ ಕೋಟಿ ರೂಪಾಯಿ ಕರಗಿದೆ. ಹೀಗಿರುವಾಗ ಜೆರೋಧಾ ಸಂಸ್ಥಾಪಕ ನಿತಿನ್ ಕಾಮತ್‌ ಮಾರುಕಟ್ಟೆಯ ಈಗಿನ ಪರಿಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ಭಾರತದ ಷೇರು ಮಾರುಕಟ್ಟೆ ದಿನೇ ದಿನೇ ಹೆಚ್ಚು ಕುಸಿಯತೊಡಗಿದ್ದು, ಫೆಬ್ರವರಿಯಲ್ಲಂತೂ ದೊಡ್ಡ ಕುಸಿತ ಕಂಡಿದೆ. ಸೆನ್ಸೆಕ್ಸ್ 4,000…

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಮುಂದಿನ 10-15 ವರ್ಷಗಳಲ್ಲಿ ಶಿಕ್ಷಕರ ಜಾಗದಲ್ಲಿ Al ಬೋಧನೆ ಸಾಧ್ಯತೆ : ಡಿಕೆಶಿ

ಬೆಂಗಳೂರು, ವಿಜ್ಞಾನ-ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು, ಮುಂದಿನ 10-15 ವರ್ಷಗಳಲ್ಲಿ ತರಗತಿಗಳಿಗೆ ಶಿಕ್ಷಕರ ಆಗತ್ಯವೇ ಇಲ್ಲದಂತೆ ಕೃತಕ ಬುದ್ದಿಮತ್ತೆಯ ಬೋಧನೆ ಜಾರಿಯಾಗುವ ಸಾಧ್ಯತೆಯಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ನೆಹರೂ ತಾರಾಲಯ ನೂತನವಾಗಿ ನಿರ್ಮಿಸಿರುವ ಪ್ರೊಫೆಸರ್ ಯು.ಆರ್.ರಾವ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ತಾವು ಸೌದಿ ಆರೇಬಿಯಾಕ್ಕೆ ತೆರಳಿದ್ದು ಅಲ್ಲಿ ಉಪನ್ಯಾಸಕರೊಬ್ಬರ ಜೊತೆ ಮಾತನಾಡುವಾಗ ಮುಂದಿನ 15 ವರ್ಷಗಳಲ್ಲಿ ಮಾನವ ಶಿಕ್ಷಕರ ಅಗತ್ಯವೇ ಇರುವುದಿಲ್ಲ. ಎಲ್ಲವೂ ತಂತ್ರಜ್ಞಾನ ಆಧುತ ಎಐ ಅನುಸಾರ ನಡೆಯಲಿದೆ ಎಂದು ಹೇಳಿದರು. ಕಾರ್ಯಕ್ರಮವೊಂದರಲ್ಲಿ…

ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಗುಲಬರ್ಗಾ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ,-ಲೋಕಾಯುಕ್ತ ಎಸ್‌ಪಿ ಬಿ.ಕೆ.ಉಮೇಶ ಅವರ ನೇತೃತ್ವದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಇಂದು ದಾಳಿ ನಡೆಸಲಾಗಿದೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಈ ಹಿನ್ನೆಲೆಯಲ್ಲಿ ಲೋಕಾ ಯುಕ್ತ ಅಧಿಕಾರಿಗಳು ಎಸ್‌ಪಿ ಬಿ.ಕೆಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5-ತಂಡಗಳಲ್ಲಿ ದಾಳಿ ನಡೆಸಿ ಹಾಜರಿ ಪುಸ್ತಕ,ಚಲನವಲನ ರಿಜಿಸ್ಟರ್, ಕ್ಯಾಸಿಸ್ಟ‌ರ್ ಪರಿಶೀಲನೆ ನಡೆಸಿದರು. ಡಿವೈಎಸ್ಪಿಗಳಾದ ಗೀತಾ ಬೇನಾಳ, ಹನುಮಂತ್ ರಾಯ್, ಇನ್ನೆ ಕರಳಾದ ಸಂತೋಷ್,ಅರುಣ್ ಕುಮಾರ್. ಸಿದ್ದರಾಯ, ರಾಜಶೇಖರ್…

ಸಚಿವ ಎನ್ ಎಸ್ ಬೋಸರಾಜು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಾಗಿ

ಸಚಿವ ಎನ್ ಎಸ್ ಬೋಸರಾಜು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಾಗಿ

ಮಂತ್ರಾಲಯದ ಶ್ರೀ ರಾಘವೇಂದ್ರ ಮಠದಲ್ಲಿ ಗುರು ವೈಭವೋತ್ಸವ ಸಂಭ್ರಮ ಹಾಗೂ ರಾಯರ 404ನೇ ಪಟ್ಟಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಮಠದ ಪೀಠಾಧಿಪತಿಗಳಾದ ಶ್ರೀ ಸುಭುದೇಂದ್ರ ತೀರ್ಥ ಸ್ವಾಮಿಗಳವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಹಾಗೂ ಬೃಹತ್ ಕೈಗಾರಿಕೆ ಹಾಗೂ ಹುಕ್ಕು ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರು  ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದರು.* ವೇದಿಕೆಯಲ್ಲಿ ಜೆಡಿಎಸ್ ಮುಖಂಡರಾದ ಅನಿತಾ ಕುಮಾರಸ್ವಾಮಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ  ಕೆ…

ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ರಾಯಚೂರು ಮಾ.01 : ನಮ್ಮ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಿ, ಅವರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು  ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಹೇಳಿದರು.ಮಾ.01ರ ಶನಿವಾರ ದಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಬೆಂಗಳೂರು, ಸಂಜೀವಿನಿ-ಕೆಎಸ್‌ಆರ್‌ಎಲ್‌ಪಿಎಸ್ ಮತ್ತು ಜಿಲ್ಲಾ…

ಲಿಂಗಸುಗೂರಲ್ಲಿ ನೂತನ ನ್ಯಾಯಾಲಯದ ಕಟ್ಟಡ ಲೋಕಾರ್ಪಣೆ; ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

ಲಿಂಗಸುಗೂರಲ್ಲಿ ನೂತನ ನ್ಯಾಯಾಲಯದ ಕಟ್ಟಡ ಲೋಕಾರ್ಪಣೆ; ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ

ರಾಯಚೂರು ಮಾ.01 : ಲಿಂಗಸುಗೂರು ಐತಿಹಾಸಿಕ ಪಟ್ಟಣವಾಗಿದ್ದು, ರಾಷ್ಟ್ರಕೂಟರು, ಚಾಲುಕ್ಯರು ಹಾಗೂ ಮೌರ್ಯ ವಂಶಸ್ಥರು ಆಳ್ವಿಕೆ ಮಾಡಿದ ನೆಲ ಇದಾಗಿದೆ. ಇಲ್ಲಿನ ಜನರಿಗೆ ಉತ್ತಮ ರೀತಿಯಲ್ಲಿ ನ್ಯಾಯ ನೀಡುವ ನಿಟ್ಟಿನಲ್ಲಿ ವಕೀಲರು ಶ್ರಮಿಸಬೇಕೆಂದು ಗೌರವಾನ್ವಿತ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ ಅವರು ಹೇಳಿದರು.      ಮಾ.01ರ ಶನಿವಾರ ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯಾಲಯದ ಕಟ್ಟಡ, ವಕೀಲರ ಭವನ, ನ್ಯಾಯಾದೀಶರ ವಸತಿಗೃಹ ಲೋಕಾರ್ಪಣೆ ಹಾಗೂ ಇ-ಸೇವಾ ಕೇಂದ್ರದ ಕಟ್ಟಡಕ್ಕೆ ಶಂಕುಸ್ಥಾಪನೆ ನೇರವರಿಸಿ ಅವರು ಮಾತನಾಡಿದರು.      ಅಶೋಕನ…

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ
|

ಮಾತೋಶ್ರೀ ತಾರಾದೇವಿ ರಾಂಪೂರೆ ಔಷಧಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಒಂದು ದಿನದ ವಿಚಾರ ಸಂಕಿರಣ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾತೋಶ್ರೀ ತಾರಾದೇವಿ ರಾಂಪೂರೆ ಔಷದ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದ ಅಡಿಯಲ್ಲಿ ಎಂ ಫಾರ್ಮ್ ಮತ್ತು ಬಿ ಫಾರ್ಮ್ ವಿಧ್ಯಾರ್ಥಿಗಳಿಗೆ ಒಂದು ದಿನದ ವಿಚಾರ ಸಂಕಿರಣ ಏರ್ಪಡಿಸಲಾಗಿತ್ತು.ಈ ವಿಚಾರ ಸಂಕಿರಣದಲ್ಲಿ ವಿಯಾಟ್ರೀಸ್ ಲಿಮಿಟೆಡ್ ಕಂಪನಿಯ ಉಪಾಧ್ಯಕ್ಷರಾದ ಪ್ರಶಾಂತ್ ದೇಶಪಾಂಡೆಯವರು ಅತಿಥಿಗಳಾಗಿ ಭಾಗವಹಿಸಿದ್ದರು.ನಂತರ ಮಾತನಾಡಿ ಔಷಧಿಯ ಉದ್ಯಮದಲ್ಲಿನ ಇತ್ತಿಚಿಗೆ ಔಷಧಿ ವಿಧ್ಯಾರ್ಥಿಗಳಿಗೆ ಬಹಳಷ್ಟು ಅವಕಾಶಗಳು ಒದಗುತ್ತಿದ್ದು ಹೆಚ್ಚು ಹೆಚ್ಚು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.ಅವರು  ಆಪ್ರಿಕಾ ದೇಶದದಲ್ಲಿ ವಿವಿಧ ಔಷಧೀಯ ಕಂಪನಿಗಳಲ್ಲಿ…