June 15, 2025 2:57 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಕಲಬುರಗಿಯ ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನ.

ಕಲಬುರಗಿಯ 01-06-25.ಐವಾನ ಶಾಹಿ ಅತಿಥಿ ಗೃಹದಲ್ಲಿ ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ವಿ ಸೋಮಣ್ಣನವರಿಗೆ ಕಲಬುರಗಿಯ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಅವರು ಭೇಟಿ ಮಾಡಿ ಕೇಂದ್ರ ಸಚಿವರಿಗೆ ಸನ್ಮಾನವನ್ನು ಮಾಡಿದರು ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಬಿ ಜಿ ಪಾಟೀಲ, ಜಿಲ್ಲಾ ವೀರಶೈವ ಸಮಾಜದ ಉಪಾಧ್ಯಕ್ಷರಾದ ಕಲ್ಯಾಣಪ್ಪ ಪಾಟೀಲ ಮಳಖೇಡ, ಶ್ರೀಶೈಲ ಮೂಳಿ, ನಾಗು ಪಾಟೀಲ, ಸತಿಶಕುಮಾರ ಸಾಹು, ವಿಶ್ವನಾಥ ಪಾಟೀಲ ಸರಡಗಿ, ಇದ್ದರು

ಬೀದರ: ಮೆಟ್ರಿಕ್ ಪೂರ್ವ/ನಂತರ ಬಾಲಕ-ಬಾಲಕಿಯರ ವಸತಿ ನಿಲಯಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ ಮೇ.26:- 2025-26ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ/ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ  HMIS   ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಸತಿ ನಿಲಯಗಳ ವಿವರ: ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ ವಸತಿ ನಿಲಯ ಜನವಾಡ ರಸ್ತೆ ಬೀದರ,

ಜೂನ್ 05 ರಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ

ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸಲು ಜಾಗೃತಿ ಅಭಿಯಾನ : ಸಿಇಒ ಲವೀಶ್ ಒರಡಿಯಾ*ಜಲಮೂಲಗಳನ್ನು ಪ್ಲಾಸ್ಟಿಕ್ ಮಾಲಿನ್ಯದಿಂದ ತಡೆಗಟ್ಟುವುದು|ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ , ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಪ್ರೇರೆಣೆ.ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡಿ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. “ಜಾಗತಿಕವಾಗಿ ಪ್ರಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” (Ending Plastic Pollution Globally) ಎಂಬ ಘೋಷ ವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ  ಮೇ 22 ರಿಂದ

ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ಶಿಬಿರ

ಬಳ್ಳಾರಿ, ಮೇ. 24:ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಕರ್ನಾಟಕದ ಪ್ರತಿಷ್ಠಿತ, ಗೌರವನೀಯ,‌ ವಿಶ್ವಾಸಾರ್ಹ ಸಂಸ್ಥೆ ಆಗಿದ್ದು,‌ ಜನಸೇವೆಯ ಮೂಲಕ ವಿಶಿಷ್ಟವಾಗಿ ಗುರುತಿಸಿಕೊಳ್ಳುತ್ತಿದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮತ್ತು ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಎಪಿಎಂಸಿ ಆವರಣದಲ್ಲಿ ಶನಿವಾರ ‌ಏರ್ಪಡಿಸಿದ್ದ ಉಚಿತ ಹೃದಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಡಿಸಿಸಿಐ

ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಮೀಕ್ಷೆ ಕುರಿತು ಸಭೆ:ಸ್ವಯಂ ದೃಢೀಕರಣದ ಅಥವಾ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಮಾಡಿಕೊಳ್ಳಬಹುದಾಗಿದೆ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ

ಬೀದರ ಮೇ.23:- ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ ಸಂಬoಧಕಸಿದoತೆ ಬೇಡ ಜಂಗಮ ಜಾತಿ ಮತ್ತು ಮಾದಿಗ ಜಾತಿಯವರು ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿರುವ ಕುರಿತು ಈಗಾಗಲೇ ಸರ್ಕಾರಕ್ಕೆ ಪತ್ರ ವ್ಯವಹರಿಸಲಾಗಿದೆ ಹಾಗೂ ವಲಸೆ ಹೋಗಿರುವ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ದೃಢೀಕರಣದ ಮೂಲಕ ಅಥವಾ ವಿಶೇಷ ಶಿಬಿರಗಳನ್ನು ನಡೆಸುವ ದಿನಾಂಕಗಳAದು ತಮ್ಮ ಸಮೀಕ್ಷೆಯನ್ನು ಮಾಡಿಕೊಳ್ಳಬಹುದು. ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣದ

ಜಿಲ್ಲಾ ಸಮನ್ವಯ ಸಮಿತಿ ಸಭೆ:ಲಾರ್ವಾ ಸಮೀಕ್ಷೆ ತೀವ್ರಗೊಳಿಸಿ, ಈಡಿಸ್ ಉತ್ಪತ್ತಿ ತಾಣ ನಿರ್ಮೂಲನೆ ಮಾಡಿ-ಬಿ.ಫೌಜಿಯಾ ತರನ್ನುಮ್

ಕಲಬುರಗಿ,ಮೇ.22: ಸಾಂಕ್ರಾಮಿಕ ರೋಗ ಡೆಂಗ್ಯೂ ಹರಡಲು ಕಾರಣವಾಗುವ ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳ ನಿರ್ಮೂಲನೆ ಮಾಡಬೇಕು ಮತ್ತು ಲಾರ್ವಾ ಸಮೀಕ್ಷೆ ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.       ಗುರುವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡೆಂಗ್ಯೂ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಜರುಗಿದ ಜಿಲ್ಲಾ ಸಮನ್ವಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ನಗರಸಭೆ, ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ

ಓ.ಟಿ.ಆರ್ ಸಂಖ್ಯೆ ಸೃಜಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವಂತೆ ಸೂಚನೆ

ರಾಯಚೂರು 23.ಮೆ 25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ 9 ಮತ್ತು 10ನೇ ತರಗತಿ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಎನ್.ಎಸ್.ಪಿ. ಪೋರ್ಟಲ್‌ನಲ್ಲಿ ಓ.ಟಿ.ಆರ್ ಸಂಖ್ಯೆಯನ್ನು ಸೃಜಿಸುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಕೋರಲಾಗಿದೆ.ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ

ಮುಂಬೈ-ರಾಯಚೂರು ಹಾಗೂ ರಾಯಚೂರು-ಪುಣೆ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ 

ಕಲಬುರಗಿ,ಮೇ.22.-ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಪ್ರಯಾಣಿಕರ ಬೇಡಿಕೆ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೇಂದ್ರ ರೈಲ್ವೆಯು ಸೋಲಾಪುರ ವಿಭಾಗದಿಂದ ಎಲ್.ಟಿ.ಟಿ. ಮುಂಬೈ-ರಾಯಚೂರು ಹಾಗೂ ರಾಯಚೂರು-ಪುಣೆ ಮಾರ್ಗಗಳಲ್ಲಿ ಒನ್ ವೇ ವಿಶೇಷ ರೈಲುಗಳು ಸಂಚರಿಸಲಿವೆ.   ಈ ವಿಶೇಷ ರೈಲುಗಳು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ. ಎಲ್.ಟಿ.ಟಿ. (ಐಖಿಖಿ) ಮುಂಬೈ-ರಾಯಚೂರು ವಿಶೇಷ ರೈಲು (3 ಟ್ರಿಪ್‌ಗಳು).  ರೈಲು ಸಂಖ್ಯೆ 01107 ವಿಶೇಷ ರೈಲು ಇದೇ ಮೇ 22 ಮತ್ತು ಮೇ 24 ರಂದು ಮಧ್ಯಾಹ್ನ

ಬೆಂಗಳೂರು-ಬೀದರ್ ವಿಶೇಷ ರೈಲು ಕಲಬುರಗಿ ಮತ್ತು ಶಹಾಬಾದ್ ರೈಲು ನಿಲ್ದಾಣಗಳಲ್ಲಿ ನಿಲುಗಡೆ

ಕಲಬುರಗಿ,ಮೇ.22.-ಕೇಂದ್ರ ರೈಲ್ವೆ ಸೋಲಾಪುರ ವಿಭಾಗದಿಂದ ಕಲಬುರಗಿ ಮತ್ತು ಶಹಾಬಾದ್ ರೈಲ್ವೆ ನಿಲ್ದಾಣಗಳಲ್ಲಿ Sಒಗಿಖಿ ಬೆಂಗಳೂರು-ಬೀದರ್ ವಿಶೇಷ ರೈಲನ್ನು ನಿಲುಗಡೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸೋಲಾಪುರ ವಿಭಾಗದ ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.        ಈ ವಿಶೇಷ ರೈಲು  Sಒಗಿಖಿ ಬೆಂಗಳೂರು-ಬೀದರ್ (6 ಟ್ರಿಪ್‌ಗಳು) 06589 ವಿಶೇಷ ರೈಲುಗಳು Sಒಗಿಖಿ ಬೆಂಗಳೂರಿನಿAದ ಮೇ 22, ಮೇ 24 ಹಾಗೂ ಮೇ 26 ರಂದು ರಾತ್ರಿ 21:15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 10.15 ಕ್ಕೆ

ಭಯೋತ್ಪಾದನಾ ವಿರೋಧಿ ದಿನದ ಪ್ರಯುಕ್ತ ಕೇಂದ್ರ ಕಾರಾಗೃಹದಲ್ಲಿ ಪ್ರಮಾಣ ವಚನ ಸ್ವೀಕಾರ

ಕಲಬುರಗಿ,ಮೇ.21.-ಭಯೋತ್ಪಾದನಾ ದಿನದ ಪ್ರಯುಕ್ತ ಸರ್ಕಾರ ಹಾಗೂ ಪ್ರಧಾನ ಕಛೇರಿಯ ಆದೇಶದಂತೆ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಬುಧವಾರ    ಕಾರಾಗೃಹದ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನವನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಕಚೇರಿ ಸಹಾಯಕ ಅಧೀಕ್ಷಕರಾದ   ಚನ್ನಪ್ಪ, ಸಂಸ್ಥೆಯ ವೈದ್ಯಾಧಿಕಾರಿಗಳಾದ ಡಾ|| ರವೀಂದ್ರ ಬನ್ನೇರ್, ಜೈಲರ್‌ಗಳಾದ ಸಾಗರ ಪಾಟೀಲ್, ಶ್ರೀಮಂತಗೌಡ ಪಾಟೀಲ್ ಹಾಗೂ ಕಛೇರಿ ಅಧೀಕ್ಷಕರಾದ   ಗುರುಶೇಶ್ವರ ಶಾಸ್ತಿç, ಸಂಸ್ಥೆಯ ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ