August 4, 2025 1:40 pm

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಪಾಕಿಸ್ತಾನದ ರಾಜಧಾನಿಗೇ ನುಗ್ಗಿದ ಭಾರತ; ಇಸ್ಲಮಾಬಾದ್, ಲಾಹೋರ್ ಮೇಲೆ ವಾಯುದಾಳಿ

ಪಾಕಿಸ್ತಾನದ ಹಲವು ನಗರಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದೆ. ಕೆಲವೇ ನಿಮಿಷಗಳ ಮೊದಲು ಭಾರತೀಯ ಸೇನೆ ಪಾಕಿಸ್ತಾನದ 3 ಎಡಬ್ಲ್ಯುಎಸಿಎಸ್‌ ಅನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನದ ದಾಳಿ ತೀವ್ರಗೊಂಡಿದ್ದು, ಭಾರತ ಪ್ರತೀಕಾರವಾಗಿ ಲಾಹೋರ್ ಮತ್ತು ಸಿಯಾಲ್‌ಕೋಟ್, ಇಸ್ಲಾಮಾಬಾದ್ ಮೇಲೆ ಕೂಡ ದಾಳಿ ನಡೆಸಿದೆ. ನಿನ್ನೆ ರಾತ್ರಿಯಿಂದ ಈಗಿನವರೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ 4 ಬಾರಿ ದಾಳಿ-ಪ್ರತಿದಾಳಿ ನಡೆದಿರುವುದರಿಂದ ಗಡಿಯಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ನವದೆಹಲಿ, ಮೇ 8: ನಿನ್ನೆ ಎಲ್ಒಸಿಯಲ್ಲಿ ಪಾಕಿಸ್ತಾನದ ಸೇನೆ ದಾಳಿ ನಡೆಸಿ

ಡಾ. ಪಿ. ಎಸ್. ಶಂಕರ ಅವರ ಲೇಖನಿಯಿಂದ ಮೂಡಿ ಬಂದ ಕನ್ನಡ ವೈದ್ಯಕೀಯ ವಿಶ್ವಕೋಶದ 3ನೇ ಆವೃತ್ತಿ.

ಪ್ರಖ್ಯಾತ ವೈದ್ಯಕೀಯ ಶಿಕ್ಷಕ ಮತ್ತು ವೈದ್ಯಶಾಸ್ತçದ ಪ್ರಾಧ್ಯಾಪಕ ಡಾ. ಪಿ. ಎಸ್. ಶಂಕರ್ ಅವರು ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಮತ್ತೊಂದು ಅಪರೂಪದ ಮೈಲಿಗಲ್ಲು ಸಾಧಿಸಿದ್ದಾರೆ. ಹಂಪಿಯಲ್ಲಿರುವ ಕನ್ನಡ ವಿಶ್ವವಿದ್ಯಾಲಯವು 1995 ರಲ್ಲಿ ಪ್ರಕಟಿಸಿದ ವೈದ್ಯ ವಿಶ್ವಕೋಶ ಪುಸ್ತಕದ ಮೊದಲ ಆವೃತ್ತಿ ಹಾಗೂ 2025ರಲ್ಲಿ ಬಿಡುಗಡೆಯಾದ ವೈದ್ಯ ವಿಶ್ವಕೋಶದ ಮೂರನೇ ಆವೃತ್ತಿಯೊಂದಿಗೆ ಅವರು ಮೂರು ದಶಕಗಳ ಕಾಲ ಕನ್ನಡದಲ್ಲಿ ಪ್ರಕಟವಾದ ಮೊದಲ ವೈದ್ಯಕೀಯ ವಿಶ್ವಕೋಶದ ಮೂರು ಆವೃತ್ತಿಗಳನ್ನು ಸಂಪಾದಿಸುವ ಮೂಲಕ ಮತ್ತೊಂದು ಪ್ರತಿಷ್ಠಿತ

ಜೀನೂರು ಕ್ಯಾಂಪಿನಲ್ಲಿ ಆರೋಗ್ಯ ತಪಾಸಣೆ ಶಿಬಿರ

ರಾಯಚೂರು 08.ಮೇ 25: ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ್ ಗ್ರಾಮ ಪಂಚಾಯಿತಿಯ ಜೀನೂರು ಕ್ಯಾಂಪಿನಲ್ಲಿ ಗ್ರಾಮ ಪಂಚಾಯತ್ ಮತ್ತು ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ದುಡಿಯೋಣ ಬಾ ಅಭಿಯಾನ ಕಾರ್ಮಿಕರಿಗಾಗಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.ಈ ವೇಳೆ ಪೋತ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಗುರುನಾಥ ರೆಡ್ಡಿ ಅವರು ಮಾತನಾಡಿ, ಕೂಲಿಕಾರರ ಆರೋಗ್ಯದ ಹಿತದೃಷ್ಠಿಯಿಂದ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡಿದ್ದು, ಉಚಿತ ಚಿಕಿತ್ಸೆ ಮತ್ತು ಔಷಧ ನೀಡಲಾಗುತ್ತಿದ್ದು, ಶಿಬಿರದ ಲಾಭ ಪಡೆಯಬೇಕೆಂದರು.ಈ ವೇಳೆ ನರೇಗಾ ತಾಲೂಕು ಸಂಯೋಜಕ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: 2025-26ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು, ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಭಾಗ್ಯಶ್ರೀ ಕುಂಬಾರ ಅವರು ತಿಳಿಸಿದ್ದಾರೆ.      ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರ ಪತ್ರದನ್ವಯ 2025-26ನೇ ಸಾಲಿನ ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ

ಬೇವಿನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು : ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗೆ ಅರ್ಜಿ ಆಹ್ವಾನ

ಯಾದಗಿರಿ : 08.ಮೇ 25: ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನ ಬೇವಿನಹಳ್ಳಿ 2025-26ನೇ ಸಾಲಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುದಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಚನ್ನಬಸಪ್ಪ ಅವರು ತಿಳಿಸಿದ್ದಾರೆ.      ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬೇವಿನಹಳ್ಳಿ ಕ್ರಾಸ್ ಇಲ್ಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗಕ್ಕೆ ಪಿ.ಸಿ.ಎಂ.ಬಿ

ನೂತನ ಗ್ರಾಮ ಆಡಳಿತಾಧಿಕಾರಿಗಳಿಗೆ ತರಬೇತಿ ಕಲಬುರಗಿ

3.ಮೇ.25.ಕಲಬುರಗಿ ಜಿಲ್ಲೆಗೆ ಹೊಸದಾಗಿ ನೇಮಕವಾದ 60 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಶುಕ್ರವಾರ ಇಲ್ಲಿನ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ತರಬೇತಿ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಶಿಬಿರಾರ್ಥಿಗಳಿಗೆ ಕಂದಾಯ ಇಲಾಖೆಯಲ್ಲಿ ಸೇವೆಗಳನ್ನು ಸಾರ್ವಜನಿಕರಿಗೆ ಹೇಗೆ ತಲುಪಿಸಬೇಕು ಎಂದು ತಿಳಿಸುತ್ತಾ ಕರ್ತವ್ಯ  ನಿಷ್ಠೆ ಮೆರೆಯುವಂತೆ ನೌಕರರಿಗೆ ತಿಳಿಸಿದರು.  ಸಹಾಯಕ ಆಯುಕ್ತೆ ಸಾಹಿತ್ಯ, ರಾಷ್ಟ್ರಿರ್ಯ ಹೆದ್ದಾರಿ ಪ್ರಾಧಿಕಾರದ ವಿಶೇಷಾ ಭೂಸ್ವಾಧೀನಾಧಿಕಾರಿ ರಾಮಚಂದ್ರ ಗಡದ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶಿವಪ್ರಭು ಹಿರೇಮಠ ಹಾಗೂ ಸಿಬ್ಬಂದಿ

ರಾಜ್ಯದಲ್ಲಿ ಅನೇಕ ವಿಭಾಗಳಲ್ಲಿ ಎಲ್ಲರಿಗೂ ಉದ್ಯೋಗ ಖಾಯಂ ಭಾಗ್ಯ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರೀ ಗೆ ದುರ್ಭಾಗ್ಯ…..

ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗಿನ 73 ಸಾವಿರ ಗೆಸ್ಟ್ ಟೀಚರ್‌ಗೆ ಇಲ್ಲ ಸೇವಾ ಭದ್ರತೆ ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನೇ ನೆಚ್ಚಿಕೊಳ್ಳಲಾಗಿದೆ. ಸುಮಾರು 73 ಸಾವಿರ ‘ಅತಿಥಿ’ ಮೇಷ್ಟ್ರುಗಳು ಪಾಠ ಮಾಡುತ್ತಿದ್ದಾರೆ. ಅದರೆ ಪ್ರತಿ ವರ್ಷದ ಸೇವಾಭದ್ರತೆ ಸೇರಿದಂತೆ ಹಕ್ಕಿಗಾಗಿ ಹೊನಾಡುತ್ತಲೇ ಶೈಕ್ಷಣಿಕ ವರ್ಷ ಮುಗಿಸುವ ಸವಾಲು ಇವರದ್ದು. ಶಿಕ್ಷಕರು, ಉಪನ್ಯಾಸಕರ ಕೊರತೆ ಜತೆಗೆ ಇತರೆ ಹುದ್ದೆಗಳು ಶಿಕ್ಷಣ ಇಲಾಖೆಯಲ್ಲಿ ಖಾಲಿ ಬಿದ್ದಿವೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ

ಸಂಜೀವ ಕುಮಾರ ಪಾಟೀಲಗೆ ಕರ್ನಾಟಕ ಯುವ ರತ್ನ ಪ್ರಶಸ್ತಿ 

ಬೆಂಗಳೂರಿನ ಕನ್ನಡ ಭವನ ನಯನ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ನ 2025ನೇ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ತಾಲೂಕ ಅಧ್ಯಕ್ಷರು ಮತ್ತು ಪತ್ರಕರ್ತರಾದ ಸಂಜೀವಕುಮಾರ್ ಪಾಟೀಲ್ ಅವರಿಗೆ ಕರ್ನಾಟಕ ರಾಜ್ಯ ಯುವ ರತ್ನ ಪ್ರಶಸ್ತಿಯನ್ನು ಕನ್ನಡ ಚಲನಚಿತ್ರದ ಹಿರಿಯ ನಟಿರಾದ ಶೃತಿ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು ಕಾರ್ಯಕ್ರಮದಲ್ಲಿ ಡಾ. ಶ್ರೀ ಸಿದ್ದರಾಜು ಸ್ವಾಮೀಜಿಗಳು ಪಾಲನಹಳ್ಳಿ ಮಠ, ಕರ್ನಾಟಕ ಸರ್ಕಾರದ ದೇವರಾಜ್ ಅರಸು ನಿಗಮದ ಅಧ್ಯಕ್ಷರಾದ ಕೀರ್ತಿ

ಕಲಬುರಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: 644 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಸಿ.ಎಂ. ಚಾಲನೆ: ಕಲಬುರಗಿಯಲ್ಲಿ ಅಭಿವೃದ್ಧಿಯ ಮಹಾಪೂರ-ಸಿದ್ದರಾಮಯ್ಯ

ಕಲಬುರಗಿ,ಏ.16 : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ವಿನಾಕಾರಣ ವಿರೋಧ ಪಕ್ಷಗಳು ಟೀಕೆ ಮಾಡುವ ಬದಲು ಕಲಬುರಗಿಗೆ ಬಂದು ನೋಡಿದರೆ ಅಭಿವೃದ್ಧಿ ಕಾರ್ಯ ಕಣ್ಣಿಗೆ ಕಾಣುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ 216.53 ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ ಮತ್ತು 6.20 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಬ್ರಾಕಿಥೆರಪಿ ವಿಕೀರಣ ಚಿಕಿತ್ಸೆ ಘಟಕ

ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ರಾಜ್ಯಾಧ್ಯಕ್ಷರಾದ ನಾಗೇಶ ಅವರು ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಸದಸ್ಯರಾದ ಮಾಂತಪ್ಪ ಪಾವಡಶೆಟ್ಟಿ,

ಬೆಂಗಳೂರಿನಲ್ಲಿ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ 70ನೇ ವರ್ಷದ ಸಂಭ್ರಮಚರಣೆಯ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ  ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘದ ರಾಜ್ಯಾಧ್ಯಕ್ಷರಾದ ನಾಗೇಶ ಅವರು ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಸದಸ್ಯರಾದ ಮಾಂತಪ್ಪ ಪಾವಡಶೆಟ್ಟಿ, ಅವರಿಗೆ ಕರ್ನಾಟಕ ರಾಜ್ಯಮಟ್ಟದ 2025 ನೇ ಸಾಲಿನ ಛಾಯಾ ಶ್ರೀ ಪ್ರಶಸ್ತಿ ಪುರಸ್ಕಾರ ಪ್ರಶಸ್ತಿ ನೀಡಿ ಸನ್ಮಾನಿಸಿದರು ಕಾರ್ಯಕ್ರಮದಲ್ಲಿಎ ಎಮ್ ಮುರಳಿ ಬೆಂಗಳೂರು, ಮಾದೇವ್ ಬೆಂಗಳೂರು, ಮತ್ತು ಅನೇಕ ಚಿಂಚೋಳಿ ತಾಲೂಕಿನ ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು