January 17, 2026 1:22 am

ಶಿವಾನಂದ‌ ಮೆಂತೆ, ಸಂಪಾದಕ
ಸುದ್ದಿ ಈ‌ದಿನ‌ ಕನ್ನಡ‌ ದಿನಪತ್ರಿಕೆ

ಸುದ್ದಿ

ಬಹುದಿನದ ಬೇಡಿಕೆಗೆ ರಾಜ್ಯ ಸರ್ಕಾರದ ಅಸ್ತು : ಕಲಬುರಗಿ ನಗರದಲ್ಲಿ ಕಟ್ಟಡದ ಎತ್ತರ ಮಿತಿ 15 ಮೀಟರ್‌ಗೆ ಹೆಚ್ಚಳ

ಕಲಬುರಗಿ,ಫೆ.22 ಕಲಬುರಗಿ ನಗರದಲ್ಲಿ ಜನವಸತಿ ಕಟ್ಟಡದ ಎತ್ತರ ಮಿತಿ 11.5 ಮೀಟರ್‌ದಿಂದ 15.0 ಮೀಟರ್ ವರೆಗೆ ಹೆಚ್ಚಿಸಲು ಪ್ರಾಧಿಕಾರದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದು ಸರ್ಕಾರಿ ಆದೇಶ ಹೊರಡಿಸಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಮತ್ತು ಆಯುಕ್ತ ಗಂಗಾಧರ ಮಾಳಗಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಲಬುರಗಿ ನಗರವು ದಿನದಿಂದ ದಿನಕ್ಕೆ ವ್ಯಾಪಕವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಆರ್ಥಿಕ ಬೆಳವಣಿಗೆಗಳ ಹಿತದೃಷ್ಟಿಯಿಂದ ಮತ್ತು ಕ್ರೆಡೈ ಸಂಸ್ಥೆಯಕೋರಿಕೆಯಂತೆ- ಇಲ್ಲಿ ಬಹುಮಹಡಿಗಳ ಕಟ್ಟಡ ಅವಶ್ಯಕತೆ ಮನಗಂಡ

ಫೆ.25 ರಂದು ನೇರ ಸಂದರ್ಶನಕ್ಕೆ ಆಹ್ವಾನ

ಯಾದಗಿರಿ : ಫೆಬ್ರವರಿ 22, (ಕ.ವಾ) : ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಹಾಗೂ ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಇವರ ಸಹಯೋಗದೊಂದಿಗೆ ಇದೇ 2025ರ ಫೆಬ್ರವರಿ 25ರ ಮಂಗಳವಾರ ರಂದು  ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಬಸವರಾಜ ಅವರು ತಿಳಿಸಿದ್ದಾರೆ.      ಅಂದು ಸಂದರ್ಶನವು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಇರುತ್ತದೆ. ಸ್ವತಂತ್ರ ಮೈಕ್ರೋಫೀನ್ ಪ್ರೆöÊ.ಲಿ ಯಾದಗಿರಿ, ಫೀಲ್ಡ್ ಅಫೀಸರ್ 20 ಹುದ್ದೆಗಳು ಖಾಲಿ ಇದ್ದು, ಅರ್ಹತೆ 10ನೇ ಪಾಸ್

ರೀಲ್ಸ್ ಗಾಗಿ ತುಂಗಭದ್ರಾ ನದಿಗೆ ಹಾರಿದ್ದ ಹೈದರಬಾದ್ ಮೂಲದ ವೈದ್ಯ ಶವ ಪತ್ತೆ!

ಕೊಪ್ಪಳ: ಮೋಜಿಗಾಗಿ ಫ್ರೆಂಡ್ಸ್ ಮುಂದೆಯೇ ತುಂಗಭದ್ರಾ ನದಿಗೆ ಹಾರಿದ್ದ ಹೈದರಾಬಾದ್ ಮೂಲದ ಮಹಿಳಾ ವೈದ್ಯೆ ಅನನ್ಯಾ ರಾವ್ ಶವ ಪತ್ತೆಯಾಗಿದೆ. ಈ ಘಟನೆ ಹಂಪಿಯಲ್ಲಿ ನಡೆದಿದೆ. ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಸ್ಮಾರಕಗಳಿಗೆ ಭೇಟಿ ನೀಡಿದ ನಂತರ, ಮಂಗಳವಾರ ರಾತ್ರಿ ಸಣಾಪುರ ಗ್ರಾಮದ ಅತಿಥಿ ಗೃಹದಲ್ಲಿ ತಂಗಿದ್ದರು. ಬುಧವಾರ ಮಧ್ಯಾಹ್ನ ಮೂವರು ಈಜಲೆಂದು ತುಂಗಭದ್ರಾ ನದಿಗೆ ತೆರಳಿದ್ದಾರೆ. ಎತ್ತರದ ಬಂಡೆಯಿಂದ ನೀರಿಗೆ ಹಾರಿ

ಕಲಬುರಗಿ: ಜೆಸ್ಕಾಂ ಕಚೇರಿಗೆ ಮೊಸಳೆ ತಂದು ರೈತರ ಅಕ್ರೋಶ!

ಕಲಬುರಗಿ, ಫೆಬ್ರವರಿ 21: ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಗರೂರ್ ಬಿ ಗ್ರಾಮದದಲ್ಲಿ ಮೊಸಳೆ ಕಾಟದಿಂದ ಬೇಸತ್ತ ಜನ ಮೊಸಳೆಯನ್ನು ಸೆರೆಹಿಡಿದುಕೊಂಡು ಬಂದು ಜೆಸ್ಕಾಂ ಕಚೇರಿಗೆ ತಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂದಹಾಗೆ, ಮೊಸಳೆ ಕಾಟಕ್ಕೂ ಜೆಸ್ಕಾಂ ಕಚೇರಿಗೂ ಏನು ಸಂಬಂಧ ಅಂದುಕೊಂಡಿರಾ? ಈ ಗರೂರ್ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಭೀಮಾ ನದಿ ಪಾತ್ರದ ಜಮೀನುಗಳಿಗೆ ನಸುಕಿನ ಜಾವ 4 ಗಂಟೆ ಸುಮಾರಿಗೆ ಮಾತ್ರ ಜೆಸ್ಕಾಂ ತ್ರೀ ಫೇಸ್ ಕರೇಂಟ್ ಸಪ್ಲೈ ಮಾಡುತ್ತಿದೆ. ಇದರಿಂದಾಗಿ ಅವರು ಕೃಷಿ ಜಮೀನಿಗೆ

ಅಪಘಾತ: ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ ಐವರ ಸಾವು

ಬೀದ‌ರ್: ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದ‌ರ್ ನಗರದ ಲಾಡಗೇರಿಯ ಒಂದೇ ಕುಟುಂಬದ ಮೂವರು ಸೇರಿದಂತೆ ಐವರು ಉತ್ತರ ಪ್ರದೇಶದ ವಾರಾಣಸಿ ಸಮೀಪ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಂಬತ್ತು ಗಂಭೀರವಾಗಿ ಗಾಯಗೊಂಡಿದ್ದಾರೆ. ಜನ ನಗರದ ಲಾಡಗೇರಿ ನಿವಾಸಿಗಳಾದ ಸಂತೋಷಕುಮಾರ (45), ಅವರ ಪತ್ನಿ ಸುನೀತಾ (40) ಹಾಗೂ ಅತ್ತೆ ನೀಲಮ್ಮ (62),ಲಕ್ಷ್ಮಿ (57), ಮೃತರು. ಸುಲೋಚನಾ, 3 (40) ಸುಜಾತ, ಕವಿತಾ, ಅನಿತಾ, ಖುಷಿ, ಗಣೇಶ, ಸಾಯಿ, ಭಗವಂತ ಹಾಗೂ ಶಿವಾ

ರೈತರು‌ ಮಣ್ಣು, ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕ

ಯಾದಗಿರಿ;ಫೆ:21(ಕ.ವಾ): ರೈತರು ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದ್ದು, ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಯಲ್ಲಿ ಪ್ರತಿಯೊಬ್ಬರು ಪಾಲದಾರರಾಗಬೇಕು ಎಂದು ಅಬ್ಬೆ ತುಮಕೂರಿನ ಶ್ರೀ ವಿಶ್ವರಾಧ್ಯ ಸಿದ್ದಸಂಸ್ಥಾನ ಮಠದ ಕಿರಿಯ ಸ್ವಾಮಿಗಳಾದ ಶಿವಶೇಖರ ಸ್ವಾಮಿ ಹೇಳಿದರು ತಾಲೂಕಿನ ಅಬ್ಬೆತುಮಕೂರ ಗ್ರಾಮದ ಶ್ರೀ ವಿಶ್ವರಾಧ್ಯ ಸಿದ್ದ ಸಂಸ್ಥಾನ ಮಠದಲ್ಲಿ ಜಿಲ್ಲಾ ಪಂಚಾಯತ ಯಾದಗಿರಿ, ಕೃಷಿ ಇಲಾಖೆ ಯಾದಗಿರಿ ವತಿಯಿಂದ ಪ್ರದಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ-ಜಲಾನಯನ ಅಭಿವೃದ್ಧಿ, ಜಲಾನಯನ ಯಾತ್ರೆ ಪ್ರಯುಕ್ತ ಪಾನಿ

ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಿರಿ–ಡಿ.ಸಿ. ಫೌಜಿಯಾ ತರನ್ನುಮ್

ಕಲಬುರಗಿ,ಫೆ.21.(ಕ.ವಾ.” ರಾಜ್ಯದಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ 7 ದಿನದಲ್ಲಿಯೇ ಇ-ಖಾತಾ ಪಡೆಯಬಹುದಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ. ಅನಧೀಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ ಇ-ಖಾತಾವನ್ನು ಪಡೆಯಬಹುದಾಗಿದೆ.

ಬೇಸಿಗೆಗೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರು..!

ಬೆಂಗಳೂರು,ಫೆ.21- ಬೇಸಿಗೆ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ನೀರಿನ ಹಾಹಾಕಾರ ಶುರುವಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಶ್ರೀಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಬಯಲುಸೀಮೆಯ ಪಾವಗಡ, ಹೊಳಲ್ಕೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡರೆ, ಉತ್ತರ ಕರ್ನಾಟಕ ಭಾಗದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಯಾದಗಿರಿ ಸೇರಿದಂತೆ ಹಲವಾರು ಜಿಲ್ಲೆಗಳ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುತ್ತಿದೆ. ಬಹುತೇಕ ಈ ಬಾರಿ ಉತ್ತಮ ಮಳೆಯಾಗಿದ್ದರಿಂದಾಗಿ ಹೆಚ್ಚಿನ ನೀರಿನ ಬವಣೆ ಕಾಣಿಸಿಕೊಂಡಿಲ್ಲ. ಕಳೆದ ಬೇಸಿಗೆಯಲ್ಲಿ 1700ಕ್ಕೂ ಹೆಚ್ಚಿನ ಗ್ರಾಮಗಳು

ಕುಂಭಮೇಳದ ಬಗ್ಗೆ ತಪ್ಪು ಮಾಹಿತಿ: 53 – ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಕ್ರಮ

ನವದೆಹಲಿ: ಮಹಾ ಕುಂಭ ಮೇಳದ ಬಗ್ಗೆ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ – ಕಳೆದ ಒಂದು ತಿಂಗಳಲ್ಲಿ ಉತ್ತರ ಪ್ರದೇಶ ಪೊಲೀಸರು 53 ಸಾಮಾಜಿಕ ಮಾಧ್ಯಮ ಖಾತೆಗಳ • ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ನಕಲಿ ಸುದ್ದಿಗಳನ್ನು ನಿಗ್ರಹಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. – ಹಳೆಯ ವೀಡಿಯೊಗಳು ಸೇರಿದಂತೆ ಅನೇಕ ದಾರಿತಪ್ಪಿಸುವ ಪೋಸ್ಟ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಎಂದು ಹಿರಿಯ – ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪ

ನಂದಿನಿ ಹಾಲಿನ ದರ 5 ರೂ ಏರಿಕೆಗೆ ಕೆಎಂಎಫ್ ನಿಂದ ಪ್ರಸ್ತಾವ ಸಲ್ಲಿಕೆ

ಬೆಂಗಳೂರು,ಫೆ.20- ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಬೆಲೆ ಏರಿಕೆಯ ಅಂತಿಮ ನಿರ್ಧಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಳದಲ್ಲಿದೆ. ಈಗಾಗಲೇ ಕೆಎಸ್‌ಆಲ್ಪಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ಹೆಚ್ಚಳಕ್ಕೆ ಮುಂದಾಗಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಹಾಲಿನ